ಪೋಸ್ಟ್‌ಗಳು

ಜೂನ್, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಈಗಿನ ಸರ್ಕಾರಗಳೇ ವಿವೇಚನೆ ಕಳೆದುಕೊಂಡಿವೆ” - ಪ್ರೊ.ಲಿಂಗದೇವರು ಹಳೆಮನೆ

ಇಮೇಜ್
ಲಿಂಗದೇವರು ಹಳೆಮನೆ ಇನ್ನಿಲ್ಲ.... 'ಲಿಂಗದೇವರು ಹಳೆಮನೆ ಇನ್ನಿಲ್ಲ ’  ಎಂದು ಮೈಸೂರಿನ ಪ್ರಜಾವಾಣಿಯಲ್ಲಿರುವ ಗೆಳೆಯ ನಾಗರಾಜ ಬುರಡಿಕಟ್ಟಿ ಮುಂಜಾನೆ ೪ ಘಂಟೆಗೆ ಕಳಿಸಿದ್ದ ಮೆಸೇಜನ್ನು ಐದು ಗಂಟೆಗೆ ಎದ್ದು ನೋಡಿದ ನನಗೆ ನಂಬಿಕೆಯೇ ಬರಲಿಲ್ಲ. ಮತ್ತೆ ಕೂಡಲೇ ಕಾಲ್ ಮಾಡಿ ಕೇಳೀದೆ. ‘ ನಾಗು.. ,  ಅದು ನಿಜವೇನೋ ?’. ‘ ಹೌದು ಮಾರಾಯಾ ,  ರಾತ್ರಿ ಹನ್ನೆರಡೂ ಮುಕ್ಕಾಲಿನ ಸುಮಾರಿಗೆ ಹಾರ್ಟ್ ಅಟ್ಯಾಕ್ ಆಗಿ ತೀರಿಕೊಂಡು ಬಿಟ್ಟರು.... ’. ಆಘಾತವೇ ಆಯಿತು. ಇತರೆ ಗೆಳೆಯರಿಗೆ ಮೆಸೇಜ್ ಫಾರ್ವರ್ಡ್ ಮಾಡುತ್ತಾ ,  ಈ ಇದುವರಗೆ ನನಗೆ ಪ್ರೀತಿಪಾತ್ರರಾದವರು ಈ ಕ್ರೂರ ’ ಹೃದಯಾಘಾತ ’ ದ ದಾಳಿಗೆ ಈಡಾದವರ ಲೆಕ್ಕ ಹಾಕತೊಗಿದೆ. ದೊಡ್ಡಪ್ಪ- ಹನುಮಂತಪ್ಪ ,  ಮಾವ- ನಾರಾಯಣಪ್ಪ ,  ಗೆಳೆಯ ಶರತ್ ,  ಪ್ರೀತಿಯ ನೋಸಂತಿ ಮೇಸ್ಟ್ರು ,  ಅಚ್ಚುಮೆಚ್ಚಿನ ಗೆಳೆಯ ,  ರಂಗಕರ್ಮಿ ,  ಹಾಡುಗಾರ ಗೋಪಾಲಣ್ಣ ,  ಕಿರಂ ಮೇಸ್ಟ್ರು............ ಈಗ ಮತ್ತೆ......... ಶಿವಮೊಗ್ಗದಲ್ಲಿ ರಂಗಾಯಣದ ಘಟಕವನ್ನು ಆರಂಭಿಸುವುದಾಗಿ ಮೊನ್ನೆಯಷ್ಟೇ ಲಿಂಗದೇವರು ಹಳೆಮನೆಯವರು ನಡೆಸಿದ್ದ ಪತ್ರಿಕಾ ಗೋಷ್ಠಿಯನ್ನು ನೋಡಿ ಸಂತಸವಾಗಿತ್ತು. ಒಂದು ಕರೆ ಮಾಡಿ ಅವರಿಗೊಂದು ಥ್ಯಾಂಕ್ಸ್ ಹೇಳೋಣ ಎಂದು ಯೋಚಿಸುತ್ತಿದ್ದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಇರುವ ಹೆಗ್ಗೋಡಿನ ನೀನಾಸಂ ,  ತುಮರಿಯ  ’ ಕಿನ್ನರ ಮ...