ಪೋಸ್ಟ್‌ಗಳು

ಆಗಸ್ಟ್, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅಣ್ಣಾ ಹೋರಾಟದಾಚೆಯ ಬಿಡಿ ಚಿತ್ರಗಳು

ಇಮೇಜ್
  ಸರ್ಕಾರ ಅಣ್ಣಾ ಹೋರಾಟಕ್ಕೆ ಬಗ್ಗುವ ಸೂಚನೆ ನೀಡಿ  ಮತ್ತೆ ಕೈಕೊಡುವಂತೆ ತೋರುತ್ತಿದೆ. ಸರ್ಕಾರ ಹಾಗೂ ಟೀಂ ಅಣ್ಣಾ ಎರಡೂ ಪಕ್ಷಗಳೂ ಸಹ ತಂತಮ್ಮ ಹಠಮಾರಿತನಗಳನ್ನು ಬಿಟ್ಟು ದೇಶದ ಹಿತವನ್ನು ಕಾಪಾಡಬೇಕೆಂಬುದು ಎಲ್ಲಾ ಪ್ರಜಾತಂತ್ರ ಪ್ರೇಮಿಗಳ ಆಶಯ. ಒಂದೊಮ್ಮೆ ಜನಲೋಕಪಾಲ ಕಾಯ್ದೆ ಜಾರಿಯಾದರೂ ಭ್ರಷ್ಟಾಚಾರದ ವಿರುದ್ಧದ ಹೋರಾಟ ಸಾಗಬೇಕಾದ ಹಾದಿ ತುಂಬಾ ದೀರ್ಘವಾದದ್ದು. ಒಂದು ಕಾಯ್ದೆ ಮಾತ್ರ ಭ್ರಷ್ಟಾಚಾರವನ್ನು ಹೋಗಲಾಡಿಸಿಬಿಡುತ್ತದೆ ಎಂಬುದು ಮೂರ್ಖತನವಾಗುತ್ತದೆ. ಆದರೆ, ಇದುವರೆಗೆ ನಡೆದಿರುವ ಈ ಅಣ್ಣಾ ಹಜಾರೆ ಹೋರಾಟದಿಂದ ಆಗಿರುವ ಒಂದು ಅತ್ಯಂತ ಒಳ್ಳೆಯ ಪರಿಣಾಮ ಏನೆಂದರೆ ನಮ್ಮ ದೇಶದ ಯುವ ಸಮೂಹದಲ್ಲಿ ಭ್ರಷ್ಟಾಚಾರದ ವಿರುದ್ಧ ಒಂದು ಎಚ್ಚರಿಕೆ ಮೂಡಿರುವುದು. ಆದರೆ ಈಗ ವ್ಯಕ್ತಗೊಂಡಿರುವ ಅಸಹನೆ, ಉಂಟಾಗಿರುವ ಜಾಗೃತಿ ಮುಂದೆ ಕೃತಿಯಾಗಿ ಮಾರ್ಪಡುತ್ತದೆಯಾ? ಇಂದು ಈ ಹೋರಾಟದಲ್ಲಿ ಭಾಗಿಯಾದ ಮಧ್ಯಮ ವರ್ಗ ಎಷ್ಟರ ಮಟ್ಟಿಗೆ ಭ್ರಷ್ಟತೆಯಿಂದ ದೂರವಾಗಿ ಬದುಕಲು ಪ್ರಯತ್ನಿಸುತ್ತದೆ? ಅಥವಾ ಸಂದರ್ಭಕ್ಕೆ ತಕ್ಕಂತೆ ಮತ್ತೆ ತನ್ನ ಇದುವರೆಗಿನ ತಟಸ್ಥತೆಗೇ ಹೊರಳಿಕೊಂಡು ಈ ದೇಶಕ್ಕೂ, ಇಲ್ಲಿನ ರಾಜಕೀಯಕ್ಕೂ ತನಗೂ ಸಂಬಂಧವೇ ಇಲ್ಲ ಎಂದು ಮುಗುಮ್ಮಾಗಿಬಿಡುತ್ತದೆಯಾ? ಇವೆಲ್ಲಾ ಪ್ರಶ್ನೆಗಳಿಗೆ ಕಾಲವೇ ಉತ್ತರ ನೀಡಬೇಕು. ನೋಡೋಣ. ಈಗ ಇಲ್ಲಿ ನಾನು ಹಂಚಿಕೊಳ್ಳಬೇಕಿರೋದು ಈಗ ನಡೆದ ಅಣ್ಣಾ ಹೋರಾಟದ 'ಬೆಂಗಳೂರು ಚಾಪ್ಟರ್‌'ನಲ್ಲಿನ ಕೆಲ ಬಿಡಿ ಚಿತ್ರ...

ಇದು ಸಿದ್ಧ ವೈಚಾರಿಕ ಚೌಕಟ್ಟುಗಳನ್ನು ಮೀರುವ ಕಾಲ : ಸಿಎನ್ನಾರ್

ಇಮೇಜ್
ಡಾ. ಸಿ.ಎನ್.ರಾಮಚಂದ್ರನ್ ಅವರು ನಾಡಿನ ಪ್ರಮುಖ ಸಂಸ್ಕೃತಿ ಚಿಂತಕರು. ಇವರ ಅಧ್ಯಯನದ ಕ್ಷೇತ್ರಗಳು ಬಹು ವಿಸ್ತಾರವಾದಂತವು. ಸೃಜನ ಸಾಹಿತ್ಯ, ವಿಮರ್ಷಾ ಸಾಹಿತ್ಯ, ಜಾನಪದ ಅಧ್ಯಯನ, ಅನುವಾದ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಕೊಡುಗೆ ಸಲ್ಲಿಸಿರುವ ಸಿಎನ್ನಾರ್ ಹರ್ಷಕುಮಾರ್ ಕುಗ್ವೆಯೊಂದಿಗೆ ಸಂಸ್ಕ್ಕೃತಿ ವಿಮರ್ಷೆ, ಜಾನಪದ ಅಧ್ಯಯನ, ಮುಂತಾದುವುಗಳ ಕುರಿತಾಗಿ ಹಲವಾರು ಒಳನೋಟಗಳನ್ನು ಹಂಚಿಕೊಂಡಿದ್ದಾರೆ. 'ಸಂಸ್ಕೃತಿ’ಯನ್ನು ನೀವು ಹೇಗೆ ಪರಿಭಾವಿಸುತ್ತೀರಿ?  ಸಂಸ್ಕೃತಿ ಎಂಬ ಪದವನ್ನು ನಾವು ಅನೇಕ ನೆಲೆಗಳಲ್ಲಿ ಅರ್ಥೈಸಬಹುದು. ಸ್ವಾತಂತ್ರ್ಯ ಪೂರ್ವದಲ್ಲಿ ನೋಡಿದರೆ ಡಿವಿಜಿ, ಅನಕೃ ಮುಂತಾದವರೆಲ್ಲಾ ಸಂಸ್ಕೃತಿಯನ್ನು ಒಂದು ರೀತಿಯಲ್ಲಿ ಅರ್ಥೈಸುತ್ತಿದ್ದರು. ಸಾಹಿತ್ಯ, ಸಂಗೀತ, ಶಿಲ್ಪಕಲೆ, ಚಿತ್ರಕಲೆ, ಇತ್ಯಾದಿ ಲಲಿತ ಕಲೆಗಳೇನಿವೆ ಅವುಗಳಲ್ಲಿರುವ ಪ್ರೌಢಿಮೆಯನ್ನು ಸಂಸ್ಕೃತಿ ಎಂದು ಅರ್ಥೈಸುತ್ತಿದ್ದರು. ಅದು ಎಷ್ಟು ಹೆಚ್ಚಿದಷ್ಟೂ ಅಷ್ಟು ನಮ್ಮ ಸಂಸ್ಕೃತಿ ಶ್ರೇಷ್ಠವಾಗಿದೆ ಎನ್ನುವ ನಿಲುವು ಅದು. ಅದೇ ಕಾಲಘಟ್ಟದಲ್ಲಿ ಇನ್ನೊಂದು ನೆಲೆಯಲ್ಲಿ ಆಧ್ಯಾತ್ಮಿಕತೆಯೊಂದಿಗೆ ಸಂಸ್ಕೃತಿಯನ್ನು ಸಮೀಕರಿಸಿ ನೋಡುವ ಪರಂಪರೆಯೂ ಇತ್ತು. ಈ ಎರಡು ನೆಲೆಯಲ್ಲಿ ಮಾತ್ರ ಸಂಸ್ಕೃತಿಯ ವ್ಯಾಖ್ಯಾನ ನಡೆಯುತ್ತಿತ್ತು. ಆದರೆ ಸುಮಾರು ೭೦ - ೮೦ರ ದಶಕದ ನಂತರ ಭಾರತದಲ್ಲಿ; ಅದಕ್ಕಿಂತ ಎರಡು ಮೂರು ದಶಕಗಳ ಹಿಂದೆ ಅಮೆರಿಕ, ಬ್ರಿಟನ್‌ಗಳಲ್ಲಿ, ಸಂಸ್ಕೃ...

ಅಣ್ಣಾ ಹಜಾರೆಗೆ ಜಯವಾಗಲಿ! ಆದರೆ..............................

ಇಮೇಜ್
ಅಣ್ಣಾ ಹಜಾರೆ ಪ್ರಾಮಾಣಿಕರು, ಭ್ರಷ್ಟಾಚಾರದ ವಿರುದ್ಧದ ಹೋರಾಟದ ಕುರಿತ ಅವರ ಬದ್ಧತೆ ಪ್ರಶ್ನಾತೀತ. ಕಾಂಗ್ರೆಸ್ ನಾಯಕರು ಮತ್ತು ಯುಪಿಎ ಸರ್ಕಾರ ಏನೇ ಹೇಳಲಿ, ಟೀಂ ಅಣ್ಣಾ ಮೇಲೆ ಏನೇ ಗೂಬೆ ಕೂರಿಸಲಿ ಅದು ಅಣ್ಣಾ ಹಜಾರೆಯವರ ನ್ಯಾಯನಿಷ್ಠೆಗೆ ಧಕ್ಕೆಯುಂಟು ಮಾಡಲಾರದು. ಆದರೆ ಈ ಸಂದರ್ಭದಲ್ಲಿ ನಾವೆಲ್ಲರೂ ಕೇಳಿಕೊಳ್ಳಲೇಬೇಕಾದ ಬಹುಮುಖ್ಯ ಪ್ರಶ್ನೆಯೊಂದಿದೆ.  ಪ್ರಾಮಾಣಿಕತೆ, ಬದ್ಧತೆ ಹಾಗೂ ನ್ಯಾಯನಿಷ್ಠೆಗಳು ಮಾತ್ರ ಒಂದು ಚಳವಳಿಯನ್ನು ಯಶಸ್ವಿಗೊಳಿಸುತ್ತವಾ? ಈ ಕುರಿತು ನನ್ನ ಅಭಿಪ್ರಾಯ ಹಂಚಿಕೊಳ್ಳುವ ಮುನ್ನ ಹೇಳಿಬಿಡುತ್ತೇನೆ. ಜನಲೋಕಪಾಲ ಜಾರಿಗಾಗಿ ಬೆಂಗಳೂರಿನಲ್ಲಿ ಚಳವಳಿ ಆರಂಭಗೊಂಡ ಸಂದರ್ಭದಲ್ಲಿ ನಡೆದ ರ‍್ಯಾಲಿಯಲ್ಲಿ, ನಂತರ ಫ್ರೀಡಂ ಪಾರ್ಕಿನಲ್ಲಿ ನಡೆದ ಧರಣಿಯಲ್ಲಿ ನಾನು ಪಾಲ್ಗೊಂಡಿದ್ದೆ. ಸಮಾಜದ ವಿವಿದ ಜನವರ್ಗಗಳು ಸ್ಟ್ರೈಕು, ಧರಣಿ ಅಂತೆಲ್ಲಾ ನಡೆಸುವಾಗ ಮುಖ ಸಿಂಡರಿಸಿಕೊಂಡು ಹೋಗುತ್ತಿದ್ದ ಐಟಿ ಗಯ್‌ಗಳು ಅಲ್ಲಿ ಅಂದು ಹೋರಾಟದ ಹುಮ್ಮಸ್ಸಿನಲ್ಲಿ ಕುಳಿತದ್ದು ಕಂಡು ಬಹಳ ಖುಷಿಗೊಂಡಿದ್ದೆ. ನಂತರ ಇತ್ತೀಚೆಗೆ ಅಣ್ಣಾ, ಕಿರಣ್ ಬೇಡಿ, ಕೇಜ್ರಿವಾಲ್ ತಂಡ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಸಿದ ಸಭೆಯಲ್ಲಿ ಪಾಲ್ಗೊಂಡಿದ್ದೆ. ಕೇಜ್ರಿವಾಲ್ ಅವರು ತಮ್ಮ ಕರಡಿನ ಪರವಾಗಿ ಮಂಡಿಸಿದ ಪ್ರತಿಯೊಂದಕ್ಕೂ ಅಲ್ಲಿದ್ದ ಎಲ್ಲರಂತೆ ನಾನೂ ಬೆಂಬಲ ಸೂಚಿಸಿದ್ದೆ. ಸರ್ಕಾರಿ ಲೋಕಪಾಲ ಮಸೂದೆಯನ್ನು ಎಲ್ಲರಂತೆ ನಾನೂ ಖಂಡಿಸಿದೆ....

ಮಂಜು ಯಾಕೋ ಹೀಗೆ ಮಾಡಿಕೊಂಡುಬಿಟ್ಟೆ??

ಇಮೇಜ್
Manju Manju and Chitra ಮಂಜು ಕಳೆದ ಬುಧವಾರ ಅಂದರೆ ೩ ನೇ ತಾರೀಖು ಸಂಜೆ ಹೊತ್ತಿಗೆ ಕಾಲ್ ಮಾಡಿದ. ಅಂದು ನಮಗೆ ಎಡಿಷನ್ ದಿನವಾದ ಕಾರಣ ಆಹೋರಾತ್ರಿ ಕೆಲಸ. ಹೀಗಾಗಿ ಬ್ಯುಸಿ ಇದ್ದ ಕಾರಣ 'ಮಂಜೂ ಇವತ್ತು ಬ್ಯುಸಿ ಇದೀನಿ ನಾಳೆ ಕಾಲ್ ಮಾಡ್ತೀನಿ ಕಣೋ'  ಎಂದು ಹೇಳಿ ಫೋನ್ ಇಟ್ಟು ನನ್ನ ಪಾಡಿಗೆ ಕೆಲಸದಲ್ಲಿ ತೊಡಗಿದೆ. ಆದರೆ ಮರುದಿನ ಅವನು ಕರೆ ಮಾಡಿದ್ದು ಮರೆತೇಬಿಟ್ಟಿದ್ದೆ.  ನೆನ್ನೆ ಮನೆಯಿಂದ ಅಪ್ಪ ನನಗೆ ಕರೆ ಮಾಡಿ 'ಹರ್ಷ, ಇವತ್ತು ಪ್ರಜಾವಾಣಿಯಲ್ಲಿ ಲೋಕಲ್ ಪೇಜಿನಲ್ಲಿ ಒಂದು ಸುದ್ದಿ ಬಂದಿದೆ. ಕೊಳಚೆಗಾರಿನಲ್ಲಿ ಮಂಜುನಾಥ ಎಂಬ ಹುಡುಗ ಸೂಸೈಡ್ ಮಾಡಿಕೊಂಡಿದಾನೆ ಅಂತಿದೆ. ಯಾರ ಅವ್ನು? ನಿನ್ನನ್ನು ಬಹಳ ಹಚ್ಚಿಕೊಂಡಿದ್ನಲ್ಲಾ ಅವನೇನಾ?' ಕೇಳಿದ್ರು. ಅಲ್ಲಿ ಮಂಜುನಾಥ ಎನ್ನುವ ಹುಡುಗ ಅವನನ್ನು ಬಿಟ್ರೆ ಬೇರೆ ಯಾರೂ ಇಲ್ಲ. ನೋಡ್ತೀನಿ ತಡಿ ಎಂದು ಇಟ್ಟವನೇ ಮಂಜು ನಂಬರ್‌ಗೆ ಕರೆ ಮಾಡಿದೆ. ಅದು ಸ್ವಿಚ್ ಆಫ್ ಆಗಿತ್ತು. ಕೊನೆಗೆ ಯಾವ್ಯಾವುದೋ ನಂಬರ್‌ಗೆಲ್ಲ ಮಾಡಿ ಕೊನೆಗೆ ಅವರಪ್ಪ ಸಿಕ್ಕಿದರು. "ಶಂಕ್ರಣ್ಣಾ ನಾನು ಕೇಳಿದ ಸುದ್ದಿ ನಿಜವಾ?' ಅದಕ್ಕೆ ಅವರು, ಹೌದು ಮಾರಾಯಾ, ಮೊನ್ನೆ ೫ ನೇ ತಾರೀಖು ಹೀಗೆ ಮಾಡಿಕೊಂಡು ಬಿಟ್ಟ’ ಎಂದರು. ಕಾರಣ ಏನೂ ಇರಲಿಲ್ಲ. ಯಾಕೆ ಮಾಡಿಕೊಂಡ ಅಂತಾನೂ ಗೊತ್ತಿಲ್ಲ. ಬ್ರಾಂಡಿ ಬಾಟಲಿಯಲ್ಲಿ ಅರ್ಧ ಲೀಟರು ವಿಷ ಹಾಕಿಕೊಂಡು ಕುಡಿದಿದ್ದ. ಸಾಗರಕ್ಕೆ ಕರೆದುಕೊಂಡು ಹೋ...

ನೆನೆಪುಗಳ ’ಮಾಯಾಚಾಪೆ’ಯಲ್ಲಿ ಕೂರಿಸುವ ಡೋರ್ ನಂಬರ್ 142

ಇಮೇಜ್
ನೆನಪುಗಳು, ಅದರಲ್ಲೂ ಬಾಲ್ಯದ ನೆನಪುಗಳು ಪ್ರತಿಯೊಬ್ಬರಿಗೂ ಮುದನೀಡುವಂತವವು. ದೊಡ್ಡವರಾಗುತ್ತಾ ಹೋದಂತೆಲ್ಲಾ ಆ ನೆನಪುಗಳು ನಮಗೆ ಹೆಚ್ಚು ಕಾಡುತ್ತಾ ಹೋಗುವುತ್ತವೆ. ಹೀಗೆ ದಿನನಿತ್ಯದ ಬದುಕಿನಲ್ಲಿ ಇಣುಕುವ, ಕಾಡುವ ನೆನಪುಗಳನ್ನು ವಿಶಿಷ್ಟ ರೀತಿಯಲ್ಲಿ ತೆರೆದಿಡುತ್ತದೆ ಅಂಕಿತ ಪ್ರಕಾಶನ ಪ್ರಕಟಿಸಿರುವ ಜಿ.ಎನ್.ಮೋಹನ್ ಅವರ ಡೋರ್ ನಂಬರ್ ೧೪೨.  ’ಡೋರ್ ನಂಬರ್ ೧೪೨’ರ ಒಳಕ್ಕೆ ಪ್ರವೇಶಿಸಿದಂತೆ, ಲೇಖಕರು ತಮ್ಮ ಬದುಕಿನ ನೆನಪುಗಳನನ್ನು ಒಂದಿಒಂದಾಗಿ ಹೇಳುತ್ತಾ ಹೋದಂತೆ ನಮ ಒಂದೊಂದಾಗಿ ನಮ್ಮವೇ ನೆನಪುಗಳು ಬಿಚ್ಚಿಕೊಳ್ಳುತ್ತವೆ. ವ್ಯಕ್ತಿ, ಸನ್ನಿವೇಶ ಬೇರೆ. ಅನುಭವ ಒಂದೇ ಎನ್ನಿಸುವಂತೆ. ಈ ಕೃತಿಯ ವೈಶಿಷ್ಟ್ಯವೆಂದರೆ ಲೇಖಕರು ಅವರು ಬಾಲ್ಯದ ನೆನಪುಗಳನ್ನು ಬಿಚ್ಚುವಾಗ ಬಾಲ್ಯದಲ್ಲೇ ಮುಳುಗಿ ಬರೆಯುವುದಿಲ್ಲ. ಬದಲಾಗಿ ಅವರ ಒಂದೊಂದು ನೆನಪುಗಳ ಹಿಂದೆಯೂ ವರ್ತಮಾನದ ಯಾವುದೋ ಒಂದು ಘಟನೆಯಿದೆ. ಗೆಳೆಯನೊಬ್ಬನ ಮಾತು ನೆನಪಿಸಿದ ನಂಜನಗೂಡು ಟೂತ್ ಪೌಡರ್, ಚೀತಾಫೈಟ್ ಬೆಂಕಿಪೊಟ್ಟಣ, ಎಂಜಿ ರೋಡಿನ ಬುಕ್ ಸ್ಟಾಲ್‌ನಲ್ಲಿರೋ ಪುಸ್ತಕ ನೆನಪಿಸಿದ ಡಾಕ್ಟರ್ ಆಂಟಿಯ ಡೈಲಾಗ್, ಟೈಮ್ಸ್ ಆಫ್ ಇಂಡಿಯಾದ ಶಾರೂಕ್ ಜಾಹೀರಾತು ನೆನಪಿಸಿದ ಅಂಟವಾಳ ಸಿಪ್ಪೆ.... ಹೀಗೆ ಪ್ರತಿಯೊಂದು ನೆನಪೂ ಇಂದಿನ ಯಾವುದೋ ಸಂದರ್ಭದ ಹಿನ್ನೆಲೆಯಲ್ಲಿ ಮೂಡುತ್ತಾ ಹೋಗುವುದು ವಿಶಿಷ್ಟವಾಗಿದೆ.  ಎಲ್ಲರಿಗೂ ನೆನಪುಗಳಿರುತ್ತವಾದರೂ ಮೋಹನ್‌ರ ರೀತಿ ದಟ್ಟವಾಗಿ ದಾಖಲಿಸುವು...

ಇದು ಯಡಿಯೂರಪ್ಪನವರ ದುರಂತ ಹಾಗೂ ನಮ್ಮೆಲ್ಲರ ದುರಂತವೂ ಸಹ: ಪ್ರೊ.ಎನ್. ಮನು ಚಕ್ರವರ್ತಿ

ಇಮೇಜ್
ಸಿನಿಮಾ ಮತ್ತು ಸಾಹಿತ್ಯಕ್ಕಿರುವ ಸಂಬಂಧವನ್ನು ಹೇಗೆ ನೋಡುತ್ತೀರಿ ? ಮೂಲಭೂತವಾಗಿ ಸಿನಿಮಾ ,  ಸಾಹಿತ್ಯದ ನಡುವೆ ಒಂದು ಸೃಜನಶೀಲ ಸಂಬಂಧ ಇದ್ದೇ ಇರುತ್ತದೆ. ಸಾಹಿತ್ಯ ಕೃತಿ ಒಂದು ಸಿನಿಮಾ ಆದಾಗಲೇ ಸಂಬಂಧ ಉಂಟಾಗುತ್ತದೆ ಎಂದು ನಾವು ನೋಡಬೇಕಾಗಿಲ್ಲ. ಅದೊಂದು ರೀತಿ ನೇರ ಸಂಬಂಧವಾದರೂ ಎರಡೂ ಕೂಡ ಪಠ್ಯಕೃತಿಗಳೇ ಎಂದು ನೋಡಬೇಕು. ಎರಡರಲ್ಲೂ ಒಂದೇ ರೀತಿಯಲ್ಲಿ ಪ್ರತಿಮೆಗಳಿರುತ್ತವೆ. ಸಿನಿಮಾವನ್ನು ಕೂಡ ಓದಬೇಕು ಎನ್ನುತ್ತೇನೆ. ಆದರೆ ,  ಸಾಮಾನ್ಯ ಜನರಿಗೆ  ’ ಓದುವ ’  ಪರಿಕಲ್ಪನೆ ಬರುವುದು ಹೇಗೆ ? ಒಂದು ಪಠ್ಯವನ್ನು ಮೊದಲ ಬಾರಿ ಓದುವಾಗ ಎಲ್ಲರೂ ಸಮಾನ್ಯ ಓದುಗರೇ. ಅಸಾಮಾನ್ಯ ಓದುಗರು ಎಂಬುದು ಇರುವುದಿಲ್ಲ. ಈ ಅರ್ಥದಲ್ಲಿ ಸಿನಿಮಾ ನೋಡುಗರೂ ಅದನ್ನು ಓದುತ್ತಿರುತ್ತಾರೆ. ಸಿನಿಮಾ ನೋಡುತ್ತಾ , ಸಿನಿಮಾ ಮೀಮಾಂಸೆ ಓದುತ್ತಾ ,  ಫಿಲಂ ಥಿಯರಿ ಓದುತ್ತಿರುವವರಿಗೆ ಕೆಲವೊಮ್ಮೆ ಕೆಲ ಸಂಗತಿಗಳು ಅರ್ಥವೇ ಆಗಿರುವುದಿಲ್ಲ. ಅನೇಕ ಶಿಬಿರಗಳಲ್ಲಿ ನನಗೆ ಅನುಭವವಾಗಿರುವುದೆಂದರೆ ಹಳ್ಳಿಯ ಜನರು ,  ಕಾರ್ಪೋರೇಷನ್ ಕೆಲಸ ಮಾಡುವವಂತವರೇ ಎಷ್ಟೋ ಸಲ ಬೌದ್ಧಿಕ ಎನ್ನುವ ಸಂಪ್ರದಾಯದಿಂದ ಬಂದವರಿಗಿಂತಲೂ ಚೆನ್ನಾಗಿ  ಸಿನಿಮಾವನ್ನು ಅನಾವರಣ ಮಾಡಿಬಿಡುತ್ತಾರೆ. ಕೆ.ವಿ. ಸುಬ್ಬಣ್ಣ ಅವರಿದ್ದಾಗ ಹೆಗ್ಗೋಡಿನಲ್ಲಿ ಬರ್ಗ್‌ಮನ್‌ರ ’ ಸೆವೆನ್ ಸೀಲ್ ’  ತೋರಿಸಿದ್ದರು. ಹಳ್ಳಿಯವರು ಅಂದರೆ ನಾವು ಯಾರಿಗೆ ಇಲ...

ಈ ಕ್ಷಣದ ಇರವು ಇನ್ನೊಂದು ಕ್ಷಣದ ನೆನಪು ಮಾತ್ರ ಆಗಿರಲು ಸಾಧ್ಯವಿದೆ:ಕೋಟಗಾನಹಳ್ಳಿ ರಾಮಯ್ಯ

ಇಮೇಜ್
೭೦ರ ದಶಕದಲ್ಲಿ ಕುಡಿಯೊಡೆದು ಹಬ್ಬಿದ ದಲಿತ ಚಳುವಳಿಯ ಸ್ಥಾಪಕ ಸದಸ್ಯರಲ್ಲೊಬ್ಬರಾದ ಕೋಟಗಾನಹಳ್ಳಿ ರಾಮಯ್ಯನವರು ತಮ್ಮದೇ ಶೈಲಿಯ ವಿಶಿಷ್ಟ ಚಿಂತನೆ ,  ಪ್ರಯೋಗಗಳಿಗೆ ಹೆಸರಾದವರು. ಇತ್ತೀಚೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಇವರು ಇತ್ತಿಚೆಗ ನಡೆದ ಕೋಲಾರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಮಕಾಲೀನ ಸಂದರ್ಭದ ಹಲವಾರು ಬಿಕ್ಕಟ್ಟುಗಳ ಬಗೆಗೆ ಅವರು ನಡೆಸಿದ ಮಾತುಕತೆ . ನಮ್ಮ ಕನ್ನಡ ಸಾಹಿತ್ಯ ಇಂದು ಯಾವ ದಿಸೆಯಲ್ಲಿ ಸಾಗುತ್ತಿದೆ ಎಂದು ಭಾವಿಸುತ್ತೀರಿ ? ಇಂದು ಸಾಹಿತಿಗಳೆನಿಸಿಕೊಂಡವರು ಅದನ್ನು ಒಂದು ಮಾಹಿತಿಯಾಗಿ ಮಾತ್ರ ನೋಡುತ್ತಿದ್ದಾರೆಯೇ ವಿನಃ ಅದರಾಚೆಗೆ ನೋಡುತ್ತಿಲ್ಲ. ಇವರಿಗೆ ಸಾಹಿತ್ಯ ರಚನೆ ಒಂದು ಚಟದ ಮಟ್ಟಕ್ಕೆ ಉಳಿದಿದೆಯೇ ಹೊರತು ಬದುಕಿಗೆ ಅನ್ವಯವಾಗುವ ನಿಟ್ಟಿನಲ್ಲಿ ಅಲ್ಲ. ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಮೌಲಿಕ ಸಾಹಿತ್ಯ ರಚನೆಯಾಗಿದ್ದು ನನಗಂತೂ ಗೊತ್ತಿಲ್ಲ. ಬರೀ ಮಾತು ,  ಚರ್ಚೆ ,  ಹಾಗೂ ಜ್ಞಾನವನ್ನು  ಹೆಚ್ಚಿಸಿಕೊಂಡರೆ ಉಪಯೋಗವಿಲ್ಲ. ಅಂಕ ಸಿಗಬಹುದು ,  ಪಿಎಚ್‌ಡಿ ಗೌರವ ಸಿಗಬಹುದಷ್ಟೆ. ಯಾವುದೇ ಸಾಹಿತ್ಯದ ಪ್ರಸ್ತುತತೆಯನ್ನು ನಿರ್ಧರಿಸುವುದು ಅದು ಆಯಾ ಕಾಲದಲ್ಲಿ ಎಷ್ಟರ ಮಟ್ಟಿಗೆ ಅನ್ವಯವಾಗುತ್ತದೆ ಎನ್ನುವುದು. ಎಪ್ಪತ್ತರ ದಶಕದಲ್ಲಿ ಒಂದು ಅಂತಹ ಅರ್ಥಪೂರ್ಣ ಸಾಹಿತ್ಯ ಹೊರಹೊಮ್ಮಿದ್ದನ್ನು ನಾವು ಕಾಣಬಹುದು. ಅದಕ್ಕೊಂದು ಉದ್ದೇಶವಿತ್ತು...