ಪೋಸ್ಟ್‌ಗಳು

ಆಗಸ್ಟ್ 5, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇದು ಯಡಿಯೂರಪ್ಪನವರ ದುರಂತ ಹಾಗೂ ನಮ್ಮೆಲ್ಲರ ದುರಂತವೂ ಸಹ: ಪ್ರೊ.ಎನ್. ಮನು ಚಕ್ರವರ್ತಿ

ಇಮೇಜ್
ಸಿನಿಮಾ ಮತ್ತು ಸಾಹಿತ್ಯಕ್ಕಿರುವ ಸಂಬಂಧವನ್ನು ಹೇಗೆ ನೋಡುತ್ತೀರಿ ? ಮೂಲಭೂತವಾಗಿ ಸಿನಿಮಾ ,  ಸಾಹಿತ್ಯದ ನಡುವೆ ಒಂದು ಸೃಜನಶೀಲ ಸಂಬಂಧ ಇದ್ದೇ ಇರುತ್ತದೆ. ಸಾಹಿತ್ಯ ಕೃತಿ ಒಂದು ಸಿನಿಮಾ ಆದಾಗಲೇ ಸಂಬಂಧ ಉಂಟಾಗುತ್ತದೆ ಎಂದು ನಾವು ನೋಡಬೇಕಾಗಿಲ್ಲ. ಅದೊಂದು ರೀತಿ ನೇರ ಸಂಬಂಧವಾದರೂ ಎರಡೂ ಕೂಡ ಪಠ್ಯಕೃತಿಗಳೇ ಎಂದು ನೋಡಬೇಕು. ಎರಡರಲ್ಲೂ ಒಂದೇ ರೀತಿಯಲ್ಲಿ ಪ್ರತಿಮೆಗಳಿರುತ್ತವೆ. ಸಿನಿಮಾವನ್ನು ಕೂಡ ಓದಬೇಕು ಎನ್ನುತ್ತೇನೆ. ಆದರೆ ,  ಸಾಮಾನ್ಯ ಜನರಿಗೆ  ’ ಓದುವ ’  ಪರಿಕಲ್ಪನೆ ಬರುವುದು ಹೇಗೆ ? ಒಂದು ಪಠ್ಯವನ್ನು ಮೊದಲ ಬಾರಿ ಓದುವಾಗ ಎಲ್ಲರೂ ಸಮಾನ್ಯ ಓದುಗರೇ. ಅಸಾಮಾನ್ಯ ಓದುಗರು ಎಂಬುದು ಇರುವುದಿಲ್ಲ. ಈ ಅರ್ಥದಲ್ಲಿ ಸಿನಿಮಾ ನೋಡುಗರೂ ಅದನ್ನು ಓದುತ್ತಿರುತ್ತಾರೆ. ಸಿನಿಮಾ ನೋಡುತ್ತಾ , ಸಿನಿಮಾ ಮೀಮಾಂಸೆ ಓದುತ್ತಾ ,  ಫಿಲಂ ಥಿಯರಿ ಓದುತ್ತಿರುವವರಿಗೆ ಕೆಲವೊಮ್ಮೆ ಕೆಲ ಸಂಗತಿಗಳು ಅರ್ಥವೇ ಆಗಿರುವುದಿಲ್ಲ. ಅನೇಕ ಶಿಬಿರಗಳಲ್ಲಿ ನನಗೆ ಅನುಭವವಾಗಿರುವುದೆಂದರೆ ಹಳ್ಳಿಯ ಜನರು ,  ಕಾರ್ಪೋರೇಷನ್ ಕೆಲಸ ಮಾಡುವವಂತವರೇ ಎಷ್ಟೋ ಸಲ ಬೌದ್ಧಿಕ ಎನ್ನುವ ಸಂಪ್ರದಾಯದಿಂದ ಬಂದವರಿಗಿಂತಲೂ ಚೆನ್ನಾಗಿ  ಸಿನಿಮಾವನ್ನು ಅನಾವರಣ ಮಾಡಿಬಿಡುತ್ತಾರೆ. ಕೆ.ವಿ. ಸುಬ್ಬಣ್ಣ ಅವರಿದ್ದಾಗ ಹೆಗ್ಗೋಡಿನಲ್ಲಿ ಬರ್ಗ್‌ಮನ್‌ರ ’ ಸೆವೆನ್ ಸೀಲ್ ’  ತೋರಿಸಿದ್ದರು. ಹಳ್ಳಿಯವರು ಅಂದರೆ ನಾವು ಯಾರಿಗೆ ಇಲ...

ಈ ಕ್ಷಣದ ಇರವು ಇನ್ನೊಂದು ಕ್ಷಣದ ನೆನಪು ಮಾತ್ರ ಆಗಿರಲು ಸಾಧ್ಯವಿದೆ:ಕೋಟಗಾನಹಳ್ಳಿ ರಾಮಯ್ಯ

ಇಮೇಜ್
೭೦ರ ದಶಕದಲ್ಲಿ ಕುಡಿಯೊಡೆದು ಹಬ್ಬಿದ ದಲಿತ ಚಳುವಳಿಯ ಸ್ಥಾಪಕ ಸದಸ್ಯರಲ್ಲೊಬ್ಬರಾದ ಕೋಟಗಾನಹಳ್ಳಿ ರಾಮಯ್ಯನವರು ತಮ್ಮದೇ ಶೈಲಿಯ ವಿಶಿಷ್ಟ ಚಿಂತನೆ ,  ಪ್ರಯೋಗಗಳಿಗೆ ಹೆಸರಾದವರು. ಇತ್ತೀಚೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಇವರು ಇತ್ತಿಚೆಗ ನಡೆದ ಕೋಲಾರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಸಮಕಾಲೀನ ಸಂದರ್ಭದ ಹಲವಾರು ಬಿಕ್ಕಟ್ಟುಗಳ ಬಗೆಗೆ ಅವರು ನಡೆಸಿದ ಮಾತುಕತೆ . ನಮ್ಮ ಕನ್ನಡ ಸಾಹಿತ್ಯ ಇಂದು ಯಾವ ದಿಸೆಯಲ್ಲಿ ಸಾಗುತ್ತಿದೆ ಎಂದು ಭಾವಿಸುತ್ತೀರಿ ? ಇಂದು ಸಾಹಿತಿಗಳೆನಿಸಿಕೊಂಡವರು ಅದನ್ನು ಒಂದು ಮಾಹಿತಿಯಾಗಿ ಮಾತ್ರ ನೋಡುತ್ತಿದ್ದಾರೆಯೇ ವಿನಃ ಅದರಾಚೆಗೆ ನೋಡುತ್ತಿಲ್ಲ. ಇವರಿಗೆ ಸಾಹಿತ್ಯ ರಚನೆ ಒಂದು ಚಟದ ಮಟ್ಟಕ್ಕೆ ಉಳಿದಿದೆಯೇ ಹೊರತು ಬದುಕಿಗೆ ಅನ್ವಯವಾಗುವ ನಿಟ್ಟಿನಲ್ಲಿ ಅಲ್ಲ. ಕಳೆದ ಹತ್ತು ವರ್ಷಗಳಲ್ಲಿ ಒಂದೇ ಒಂದು ಮೌಲಿಕ ಸಾಹಿತ್ಯ ರಚನೆಯಾಗಿದ್ದು ನನಗಂತೂ ಗೊತ್ತಿಲ್ಲ. ಬರೀ ಮಾತು ,  ಚರ್ಚೆ ,  ಹಾಗೂ ಜ್ಞಾನವನ್ನು  ಹೆಚ್ಚಿಸಿಕೊಂಡರೆ ಉಪಯೋಗವಿಲ್ಲ. ಅಂಕ ಸಿಗಬಹುದು ,  ಪಿಎಚ್‌ಡಿ ಗೌರವ ಸಿಗಬಹುದಷ್ಟೆ. ಯಾವುದೇ ಸಾಹಿತ್ಯದ ಪ್ರಸ್ತುತತೆಯನ್ನು ನಿರ್ಧರಿಸುವುದು ಅದು ಆಯಾ ಕಾಲದಲ್ಲಿ ಎಷ್ಟರ ಮಟ್ಟಿಗೆ ಅನ್ವಯವಾಗುತ್ತದೆ ಎನ್ನುವುದು. ಎಪ್ಪತ್ತರ ದಶಕದಲ್ಲಿ ಒಂದು ಅಂತಹ ಅರ್ಥಪೂರ್ಣ ಸಾಹಿತ್ಯ ಹೊರಹೊಮ್ಮಿದ್ದನ್ನು ನಾವು ಕಾಣಬಹುದು. ಅದಕ್ಕೊಂದು ಉದ್ದೇಶವಿತ್ತು...

ನಮ್ಮ ಹಳ್ಳಿಗಳು ನಿವೃತ್ತಿ ಪಡೆದವರ ಆಶ್ರಮಗಳಂತಾಗಿಬಿಟ್ಟಿವೆ :ಡಾ. ಎಚ್. ಗಣಪತಿಯಪ್ಪ

ಇಮೇಜ್
ನಮ್ಮ ಹಳ್ಳಿಗಳು ನಿವೃತ್ತಿ ಪಡೆದವರ ಆಶ್ರಮಗಳಂತಾಗಿಬಿಟ್ಟಿವೆ   :  ಡಾ. ಎಚ್. ಗಣಪತಿಯಪ್ಪ ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಆಂದೋಲನದಲ್ಲಿ ಭಾಗವಹಿಸಿ ಜೈಲುವಾಸವನ್ನೂ ಅನುಭವಿಸಿ ,  ನಂತರ ೫೦ರ ದಶಕದಲ್ಲಿ ಭೂಮಾಲೀಕರಿಂದ ರೈತಾಪಿಯ ಸ್ವಾತಂತ್ರ್ಯಕ್ಕಾಗಿ ಟೊಂಕ ಕಟ್ಟಿ ನಿಂತು ಚಾರಿತ್ರಿಕ  ’ ಕಾಗೋಡು ರೈತ ಚಳವಳಿಯ ಮುಂದಾಳತ್ವ ವಹಿಸಿದ್ದವರು ಹಿರಿಯ ಗಾಂಧೀವಾದಿ ಡಾ.ಎಚ್. ಗಣಪತಿಯಪ್ಪನವರು. ಅವರು ತಮ್ಮ ಈ ೮೮ನೆಯ ವಯಸ್ಸಿನಲ್ಲೂ ವೈಚಾರಿಕ ಎಚ್ಚರಿಕೆಯಲ್ಲಿ ಬದುಕುತ್ತಿರುವವರು. ಇವರೊಂದಿಗೆ ಹರ್ಷಕುಮಾರ್ ಕುಗ್ವೆ ನಡೆಸಿದ ಸಂದರ್ಶನ.  *  ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ನಿಮಗೆ ಇಂದು ನಮ್ಮ ದೇಶ ಪ್ರಗತಿಯ ಹಂತದಲ್ಲಿದೆ   ಅನ್ನಿಸಿದೆಯೇ ?             - ಎಲ್ಲಿಯ ಪ್ರಗತಿ ?  ಒಂದರಲ್ಲಿ ಪ್ರಗತಿ ಇದ್ದರೆ ಮತ್ತೊಂದು ಊನಗೊಂಡಿರುವ ಸ್ಥಿತಿ ನಮ್ಮದು.  ನಾವು ಅಂದು ಹೊಂದಿದ್ದ ನಿರೀಕ್ಷೆಯ ಮಟ್ಟದಲ್ಲಿ ಯಾವುದೂ ಇಲ್ಲ. ದೇಶದ ತಳಹದಿಯಾಗಿರುವ ಹಳ್ಳಿಗಳೇ ಸೊರಗಿ ಹೋಗ್ತಾ ಇವೆ. ಇಂದು ನಮ್ಮ ಹಳ್ಳಿಗಳು ನಿವೃತ್ತಿ ಪಡೆದವರ ಆಶ್ರಮಗಳಂತಾಗಿಬಿಟ್ಟಿವೆ. ಹಳ್ಳಿಗಳ ಪ್ರಗತಿಯನ್ನು ಬಿಟ್ಟು ದೇಶದ ಪ್ರಗತಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ನಾವು ಮಹಾತ್ಮಾ ಗಾಂಧೀಜೀಯವರ ಗ್ರಾಮ ಸ್ವರಾಜ್ಯ ಕಲ್ಪನೆಯನ...

ಇಂದು ಜಾತಿ ಎನ್ನುವುದೇ ಆಧುನಿಕತೆಯ ಒಂದು ಶಾಪ - ಡಾ. ಎಂ.ಎಸ್.ಆಶಾದೇವಿ

ಇಮೇಜ್
ಇಂದು ಜಾತಿ ಎನ್ನುವುದೇ ಆಧುನಿಕತೆಯ ಒಂದು ಶಾಪ  -   ಡಾ. ಎಂ.ಎಸ್.ಆಶಾದೇವಿ ಕನ್ನಡ ಸಾಹಿತ್ಯದಲ್ಲಿ ಮಹಿಳೆಯರ ಸಾಹಿತ್ಯ ರಚನೆ ಇಂದು ಯಾವ ಘಟ್ಟವನ್ನು ತಲುಪಿದೆ ಎಂದು ನಿಮ್ಮ   ಅನಿಸಿಕೆ ? ಎಲ್ಲ ಬಗೆಯ ಶೋಷಿತವರ್ಗಗಳ ಸಂಕಥನದಲ್ಲಿ ಗುರುತಿಸಬಹುದಾದ ಸಾಮಾನ್ಯ ಲಕ್ಷಣಗಳು ಇಲ್ಲೂ ಇವೆ. ಮೊದಲನೆಯದ್ದು ಆತ್ಮ ಮರುಕದ ಘಟ್ಟವಾದರೆ ಎರಡನೆಯದ್ದು ಸ್ವ - ಅರಿವಿನ ಘಟ್ಟ. ಮೂರನೆಯದ್ದು ಅಧಿಕೃತೆಯನ್ನು ದಾಖಲಿಸುವ ಘಟ್ಟ. ಹೀಗೆ ಇಂದು ಲೇಖಕಿಯರು ತಮ್ಮ ಅನುಭವಕ್ಕೂ ತಮ್ಮ ಬರವಣಿಗೆಗೂ ಒಟ್ಟಾರೆ ತಮ್ಮ ಅಭಿವ್ಯಕ್ತಿಗೆ ಅಧಿಕೃತತೆಯನ್ನು ಪಡೆದುಕೊಳ್ಳುವ ಒಂದು ಘಟ್ಟದಲ್ಲಿದ್ದಾರೆ. ನಮ್ಮ ಎದುರಿಗಿರುವ ಸವಾಲೆಂದರೆ ಲೋಕದೃಷ್ಟಿಯಿಂದ ಪಡೆದುಕೊಳ್ಳಬೇಕಾದ ಬಿಡುಗಡೆಗಿಂತ ಸ್ವ ಬಿಡುಗಡೆ ತುಂಬ ಮೂಲಭೂತವಾದದ್ದು ಅನ್ನಿಸುತ್ತೆ. ಇವತ್ತಿನ ಲೇಖಕಿಯರು ಅವರವರ ಬದುಕಿನ ಸಣ್ಣ ಪುಟ್ಟ ಸುಖ ಸಂತೋಷಗಳನ್ನು ತುಂಬ ಮುಖ್ಯವಾದದ್ದೆನ್ನುವ ಹಾಗೆ ,  ಅದೇ ಅವರ ಅನುಭವ ಲೋಕ ಎನ್ನುವ ಹಾಗೆ ಬರೆಯುತ್ತಿದ್ದಾರೆ. ಹಾಗೆ ಬರೆಯುವಾಗ ಅವರಿಗಿರುವ ಆತ್ಮವಿಶ್ವಾಸ ಒಂದು ಗುರುತರವಾದ ಬದಲಾವಣೆಯನ್ನು ತಂದುಕೊಡುತ್ತಿದೆ. ಮಹಿಳೆಯರ ಸಾಹಿತ್ಯ ಸೃಷ್ಟಿಗೆ ಯಾವ ಪ್ರತಿಸ್ಪಂದನೆ ಸಿಗುತ್ತಿದೆ ? ಇಂದು ಮಹಿಳೆಯ ಸಾಹಿತ್ಯಕ್ಕೆ ಸಿಗ್ತಾ ಇರೋ ಸ್ಥಾನ ಬೇರೆ. ಮಹಿಳೆಯ ಸಾಹಿತ್ಯ ಮತ್ತು ಸಾಹಿತ್ಯದ ಸ್ವರೂಪ ಎರಡಕ್ಕೂ ಹತ್ತಿರದ ಸಂಬಂಧವಿದೆ. ಮಹಿಳೆಯ ಸಾಹಿತ್ಯವನ್ನು ಸಾಹಿತ್...

ಇಡೀ ಭಾರತವೇ ಒಂದು ದೊಡ್ಡ ಕಸಾಯಿಖಾನೆ’ : ನಾಗೇಶ್ ಹೆಗಡೆ

ಇಮೇಜ್
ನಾಗೇಶ್ ಹೆಗಡೆ ಕನ್ನಡ ಪತ್ರಿಕೋದ್ಯಮದಲ್ಲಿ ಪ್ರಮುಖ ಹೆಸರು. ೨೫ ವರ್ಷಗಳ ಹಿಂದೆ ಪರಿಸರ ವಿಜ್ಞಾನ ವಿಷಯದಲಲಿ ದೇಶದಲ್ಲೇ ಮೊದಲ ಪ್ರಾಧ್ಯಾಪಕರಾಗಿ ನೈನಿತಾಲ್‌ನಲ್ಲಿ ಒಂದು ವರ್ಷ ಕೆಲಸ ಮಾಡಿದ ಇವರು ನಂತರ ಸೀದಾ ಕನ್ನಡ ಪತ್ರಿಕೋದ್ಯಮಕ್ಕೆ ದುಮುಕಿ  ’ ವಿಜ್ಞಾನ ವರದಿಗಾರರಾಗಿ ’,  ಬಾತ್ಮೀದಾರರಾಗಿ ಅಂಕಣಕಾರರಾಗಿ ವಿಜ್ಞಾನದ ಸತ್ಯಗಳನ್ನು ಕನ್ನಡಿಗರಿಗೆ ಅತ್ಯಂತ ಸರಳವಾಗಿ ತಿಳಿಸುತ್ತಾ ಬಂದಿರುವವರು. ನಮ್ಮಲ್ಲಿ ವೈಜ್ಞಾನಿಕ ಚಿಂತನೆಯನ್ನು ಸದಾ ಉದ್ದೀಪನಗೊಳಿತ್ತಾ ಬಂದಿರುವ ನಾಗೇಶ್ ಹೆಗಡೆಯವರು ಹಲವಾರು ವಿಷಯಗಳ ಕುರಿತು ಹಂಚಿಕೊಂಡಿದ್ದಾರೆ. ಒಬಾಮ ಅಧಿಕಾರಕ್ಕೇರಿದಾಗಿನಿಂದ ಅಣ್ವಸ್ತ್ರ ಮುಕ್ತ ವಿಶ್ವಕ್ಕಾಗಿ ಕರೆ ನೀಡುತ್ತಲೇ ಇದ್ದಾರೆ. ಇತ್ತೀಚಿನ   ಫುಕೋಸಿಮಾ ದುರಂತದ ಹಿನ್ನೆಲೆಯಲ್ಲಿ ಒಟ್ಟಾರೆ ಅಣುಶಕ್ತಿ ಬಳಕೆಯ ಬಗ್ಗೆ ಪುನರ್ ಚಿಂತನೆ ನಡೆಸಬೇಕಾದ ಅವಶ್ಯಕತೆಯಿದೆಯೆ ? - ಮರುಚಿಂತನೆ ಈಗಾಗಲೇ ಆರಂಭವಾಗಿದೆ. ಜಪಾನ್‌ನ ಒಟ್ಟೂ ವಿದ್ಯುತ್ ಉತ್ಪಾದನೆಯಲ್ಲಿ ಅಣುಶಕ್ತಿಯ ಪಾಲು ಶೇಕಡಾ ೩೦ರಷ್ಟಿತ್ತು. ಅದನ್ನು ಶೇ. ೫೦ಕ್ಕೆ ಏರಿಸಬೇಕೆಂದು ಯೋಜನೆಗಳನ್ನು ರೂಪಿಸಲಾಗಿತ್ತು. ಆದರೆ ಫುಕುಶಿಮಾ ದುರಂತದ ಅಂಥ ವಿಸ್ತರಣಾ ಯೋಜನೆಯನ್ನು ಮರುಪರಿಶೀಲನೆ ಮಾಡುವುದಾಗಿ ಜಪಾನಿನ ಪ್ರಧಾನ ಮಂತ್ರಿ ನವೊತೊ ಕಾನ್ ಮೊನ್ನೆ ಸಂಸದೀಯ ಸಮಿತಿಯ ಎದುರು ಹೇಳಿದ್ದಾರೆ. ಜರ್ಮನಿಯಂತೂ ಈಗಿನ ಸ್ಥಾವರಗಳನ್ನೂ ಕ್ರಮೇಣ ಮುಚ್ಚುವುದಾಗಿ ಘೋಷಿಸಿದೆ. ...