ಅಣ್ಣಾ ಹೋರಾಟದಾಚೆಯ ಬಿಡಿ ಚಿತ್ರಗಳು
ಸರ್ಕಾರ ಅಣ್ಣಾ ಹೋರಾಟಕ್ಕೆ ಬಗ್ಗುವ ಸೂಚನೆ ನೀಡಿ ಮತ್ತೆ ಕೈಕೊಡುವಂತೆ ತೋರುತ್ತಿದೆ. ಸರ್ಕಾರ ಹಾಗೂ ಟೀಂ ಅಣ್ಣಾ ಎರಡೂ ಪಕ್ಷಗಳೂ ಸಹ ತಂತಮ್ಮ ಹಠಮಾರಿತನಗಳನ್ನು ಬಿಟ್ಟು ದೇಶದ ಹಿತವನ್ನು ಕಾಪಾಡಬೇಕೆಂಬುದು ಎಲ್ಲಾ ಪ್ರಜಾತಂತ್ರ ಪ್ರೇಮಿಗಳ ಆಶಯ. ಒಂದೊಮ್ಮೆ ಜನಲೋಕಪಾಲ ಕಾಯ್ದೆ ಜಾರಿಯಾದರೂ ಭ್ರಷ್ಟಾಚಾರದ ವಿರುದ್ಧದ ಹೋರಾಟ ಸಾಗಬೇಕಾದ ಹಾದಿ ತುಂಬಾ ದೀರ್ಘವಾದದ್ದು. ಒಂದು ಕಾಯ್ದೆ ಮಾತ್ರ ಭ್ರಷ್ಟಾಚಾರವನ್ನು ಹೋಗಲಾಡಿಸಿಬಿಡುತ್ತದೆ ಎಂಬುದು ಮೂರ್ಖತನವಾಗುತ್ತದೆ. ಆದರೆ, ಇದುವರೆಗೆ ನಡೆದಿರುವ ಈ ಅಣ್ಣಾ ಹಜಾರೆ ಹೋರಾಟದಿಂದ ಆಗಿರುವ ಒಂದು ಅತ್ಯಂತ ಒಳ್ಳೆಯ ಪರಿಣಾಮ ಏನೆಂದರೆ ನಮ್ಮ ದೇಶದ ಯುವ ಸಮೂಹದಲ್ಲಿ ಭ್ರಷ್ಟಾಚಾರದ ವಿರುದ್ಧ ಒಂದು ಎಚ್ಚರಿಕೆ ಮೂಡಿರುವುದು. ಆದರೆ ಈಗ ವ್ಯಕ್ತಗೊಂಡಿರುವ ಅಸಹನೆ, ಉಂಟಾಗಿರುವ ಜಾಗೃತಿ ಮುಂದೆ ಕೃತಿಯಾಗಿ ಮಾರ್ಪಡುತ್ತದೆಯಾ? ಇಂದು ಈ ಹೋರಾಟದಲ್ಲಿ ಭಾಗಿಯಾದ ಮಧ್ಯಮ ವರ್ಗ ಎಷ್ಟರ ಮಟ್ಟಿಗೆ ಭ್ರಷ್ಟತೆಯಿಂದ ದೂರವಾಗಿ ಬದುಕಲು ಪ್ರಯತ್ನಿಸುತ್ತದೆ? ಅಥವಾ ಸಂದರ್ಭಕ್ಕೆ ತಕ್ಕಂತೆ ಮತ್ತೆ ತನ್ನ ಇದುವರೆಗಿನ ತಟಸ್ಥತೆಗೇ ಹೊರಳಿಕೊಂಡು ಈ ದೇಶಕ್ಕೂ, ಇಲ್ಲಿನ ರಾಜಕೀಯಕ್ಕೂ ತನಗೂ ಸಂಬಂಧವೇ ಇಲ್ಲ ಎಂದು ಮುಗುಮ್ಮಾಗಿಬಿಡುತ್ತದೆಯಾ? ಇವೆಲ್ಲಾ ಪ್ರಶ್ನೆಗಳಿಗೆ ಕಾಲವೇ ಉತ್ತರ ನೀಡಬೇಕು. ನೋಡೋಣ. ಈಗ ಇಲ್ಲಿ ನಾನು ಹಂಚಿಕೊಳ್ಳಬೇಕಿರೋದು ಈಗ ನಡೆದ ಅಣ್ಣಾ ಹೋರಾಟದ 'ಬೆಂಗಳೂರು ಚಾಪ್ಟರ್'ನಲ್ಲಿನ ಕೆಲ ಬಿಡಿ ಚಿತ್ರ...