ಪೋಸ್ಟ್‌ಗಳು

ಜೂನ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಡಾ.ರಾಜ್‌ರನ್ನು ಇಂದು ನೆನೆವುದೆಂದರೆ...

ಇಮೇಜ್
ಇಲ್ಲಿಗೆ ನೂರನೇ ವರ್ಷಕ್ಕೆ ಹಿಂದೆ ಭಾರತೀಯ ನೆಲದಲ್ಲಿ ಮೊತ್ತಮೊದಲ ಸಿನಿಮಾ ಚಿತ್ರೀಕರಣ ಆರಂಭಗೊಂಡಿತ್ತು. ದಾದಾ ಸಾಹೇಬ್ ಫಾಲ್ಕೆ ನಿರ್ದೇಶನದ ಆ ರಾಜಾ ಹರಿಶ್ಚಂದ್ರ ಸಿನಿಮಾ ತೆರೆಕಂಡ ಈ 99 ವರ್ಷಗಳಲ್ಲಿ ಭಾರತೀಯ ಸಿನಿಮಾ ಇಂದು ಬಹು ಎತ್ತರಕ್ಕೆ ಬೆಳೆದು ನಿಂತಿದೆ. ಹಿಂದಿ ಚಿತ್ರರಂಗದ ಬಾಲಿವುಡ್ ಅಲ್ಲದೇ ಎಲ್ಲಾ ರಾಜ್ಯಗಳ ಮುಖ್ಯಭಾಷೆ ಹಾಗೂ ಹಲವಾರು ಉಪಭಾಷೆಗಳ ಸಿನಿಮಾ ರಂಗಗಳೂ ಏಳಿಗೆ ಕಂಡಿವೆ. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗ ಇಡೀ ದೇಶದ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯೂ ಅಪಾರವಾದದ್ದು. ಅದರಲ್ಲೂ ಕನ್ನಡದ ನಟಸಾರ್ವಭೌಮ ದಿ. ಡಾ. ರಾಜ್‌ಕುಮಾರ್ ಅವರು ಕನ್ನಡಚಿತ್ರರಂಗವನ್ನು ರಾಷ್ಟ್ರಮಟ್ಟದಲ್ಲೂ ಪ್ರತಿನಿಧಿಸಬಲ್ಲ ಮೇರುನಟ. "ಡಾ. ರಾಜ್‌ಕುಮಾರ್‌ನಂತಹ ನಟ ಏನಾದರೂ  ಬಾಲಿವುಡ್‌ನಲ್ಲಿದ್ದಿದ್ದರೆ ನಮ್ಮಂವರು ಯಾವ ಕಡೆಗೂ ಇರುತ್ತಿರಲಿಲ್ಲ" ಎಂದು ಬಾಲಿವುಡ್ ಸಾಮ್ರಾಟ ಅಮಿತಾಬ್ ಬಚನ್ ಅವರೇ ಹಿಂದೊಮ್ಮೆ ಆಡಿದ್ದ ಮಾತನ್ನು ಗಮನಿಸಿದರೆ ರಾಜ್‌ಕುಮಾರ್ ಅವರ ಸ್ಥಾನವನ್ನು ಅರಿಯಬಹುದು. ಕರ್ನಾಟಕದಲ್ಲಿ 1921ರಿಂದಲೇ ಮೂಕಿಚಿತ್ರಗಳು ಆರಂಭಗೊಂಡಿದ್ದವು. 1934ರಲ್ಲಿ ಮೊತ್ತಮೊದಲ ಟಾಕಿ ಚಿತ್ರ ’ಸತಿ ಸುಲೋಚನ’ ಬಿಡುಗಡೆಗೊಂಡಿತ್ತು. ಆದರೆ ಆರಂಭ ಕಾಲದಲ್ಲಿ ಕನ್ನಡ ಚಿತ್ರಗಳು ಮದ್ರಾಸಿನ ಸಿನಿಮಾ ನಿರ್ಮಾಪಕರನ್ನೇ ಅವಲಂಬಿಸಬೇಕಾಗಿತ್ತು. ಅದೇ ಸಂದರ್ಭದಲ್ಲಿ ಪರಭಾಷಾ ಚಿತ್ರಗಳ ಡಬ್ಬಿಂಗ್ ಕೂಡಾ ಅಲ್ಪಸ್ವಲ್ಪ ಪ್ರಮಾಣ...

ಹಳ್ಳೀಮುಕ್ಕ..... ಬಿದ್‌ಬಿದ್ ನಕ್ಕ!

ಇಮೇಜ್
ಕೃತಿ: ಹಳ್ಳೀಮುಕ್ಕ ಎಲ್ಲೆಲ್ ಹೊಕ್ಕ ಲೇಖಕರು: ನಾಗೇಶ ಹೆಗಡೆ ಪುಟಗಳು: ೯೨ ಬೆಲೆ: ೭೫ ರೂಪಾಯಿ ಪ್ರಕಾಶನ: ಭೂಮಿ ಪ್ರಕಾಶನ ಮೊದಲ ಮುದ್ರಣ: ೨೦೧೧ ನಾಗೇಶ್ ಹೆಗಡೆಯವರ ’ಹಳ್ಳೀಮುಕ್ಕ ಎಲ್ಲೆಲ್ ಹೊಕ್ಕ’ ಅವರ ಹಿಂದಿನ ಎಲ್ಲ ಗಂಭೀರ ವಸ್ತು ವಿಷಯಗಳ ಕುರಿತ ಬರಹಗಳಿಗಿಂತ ಭಿನ್ನವಾಗಿ ತಮ್ಮ ಹಳ್ಳಿ, ಮನೆ ಮತ್ತು ಅವರ ತೋಟದ ಪರಿಸರದೊಂದಿಗಿನ ದಿನದಿನದ ಒಡನಾಟವನ್ನು ಹಾಸ್ಯಭರಿತವಾಗಿ ತೆರೆದಿಡುವ ಪುಸ್ತಕ. ವಿಜ್ಞಾನದ ಅದೆಂತಹ ಕಬ್ಬಿಣದಂತಹ ವಿಷಯವನ್ನೂ ಕಡಲೆಯಾಗಿಸಿ ಕನ್ನಡಿಗರು ಸುಲಲಿತವಾಗಿ ಓದಲು ಅನುವಾಗುವಂತೆ ಬರೆದುಕೊಂಡು ಬರುತ್ತಿರುವವರು ನಾಗೇಶ್ ಹೆಗಡೆ. ಈಗ ಈ ಕೃತಿಯಲ್ಲಿ ತಮ್ಮದೇ ಪ್ರಯೋಗ ಜೀವನದ ಅನುಭವಗಳನ್ನು ಮತ್ತೂ ಸೊಗಸಾಗಿ ಓದುಗರ ಮನಸ್ಸು ಮುದಗೊಳ್ಳುವಂತೆ ಬರೆದಿದ್ದಾರೆ.  ತಮ್ಮ ಪತ್ರಿಕಾ ವ್ಯವಸಾಯದಿಂದ ನಿವೃತ್ತಿ ಪಡೆದ ನಂತರ ಬೆಂಗಳೂರಿನ ಕೆಂಗೇರಿ ಬಳಿಯಲ್ಲಿ ಕೆಲವರು ಸಮಾನಾಸಕ್ತರು ಸೇರಿ ನಿರ್ಮಿಸಿಕೊಂಡ ಮೈತ್ರಿ ಗ್ರಾಮದಲ್ಲಿ ಲೇಖಕರ ಮನೆ ಮತ್ತು ಕೈತೋಟಗಳಲ್ಲಿನ ಕೈಕಾರ್ಯಗಳ ಕುರಿತಾಗಿ ಈ ಕೃತಿಯ ಹದಿನಾಲ್ಕು ಲೇಖನಗಳಿವೆ. ಕೃತಿಯ ಮೊದಲ ಲೇಖನ ’ದೈತೋಟರ ಮನೆಯ ಪಕ್ಕ ನಮ್ಮ ಕೈದೋಟ’ ನಮಗೆ ಹೊಸ ಬಗೆಯ ವಿಸಿಟಿಂಗ್ ಕಾರ್ಡನ್ನು ಪರಿಚಯಿಸುತ್ತದೆ. ಹೆಸರಾಂತ ಪರಿಸರವಾದಿ ಶ್ರೀಪಡ್ರೆಯವರು ಲೇಖಕರಿಗೆ ನೀಡುವ ಆ ವಿಸಿಟಿಂಗ್ ಕಾರ್ಡು ಬೇರೇನಲ್ಲ. ಒಂದು ಪಾರದರ್ಶಕ ಪ್ಯಾಕೆಟ್ ಒಳಗಿನ ನಾಲ್ಕು ಬಾಂಗ್ಲಾ ಬಸಳೆ ಬೀಜಗಳು! ದ...

"ಸಹಪಂಕ್ತಿ ಭೋಜನದಿಂದಲೇ ಜಾತಿ ಸಾಮರಸ್ಯ ಸಾಧ್ಯ" : ಪ್ರೊ. ಬಿ. ವಿ. ವೀರಭದ್ರಪ್ಪ

ಇಮೇಜ್
ಪ್ರೊ.ಬಿ.ವಿ.ವೀರಭದ್ರಪ್ಪನವರು ಕನ್ನಡ ನಾಡು ಕಂಡ ಪ್ರಖರ ವಿಚಾರವಾದಿ. ಅಧ್ಯಾಪಕರಾಗಿ, ಬರಹಗಾರರಾಗಿ ಪತ್ರಕರ್ತರಾಗಿ ಕೆಲಸ ಮಾಡಿದ ಬೀವಿಯವರು ನಾಡಿನ ವೈಚಾರಿಕ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ದೊಡ್ಡದು. ’ವೇದಾಂತ’ ರೆಜಿಮೆಂಟ್, ವೇದಗಳಲ್ಲಿ ಜನಸಾಮಾನ್ಯರು, ಭಗವದ್ಗೀತೆ: ಒಂದು ವೈಚಾರಿಕ ಒಳನೋಟ ಮುಂತಾದ ಅವರ ಕೃತಿಗಳು ನಾಡಿನ ವಿಚಾರ ಸಾಹಿತ್ಯದಲ್ಲಿ ಶಾಶ್ವತ ಸ್ಥಾನ ಪಡೆದಿರುವಂತವಹು. ಇದೀಗ ನಿವೃತ್ತ ಜೀವನ ಸಾಗಿಸುತ್ತಿರುವ ಬೀವಿಯವರು ಸಮಕಾಲೀನ ಸಂಗತಿಕಳ ಕುರಿತು ಮಾತನಾಡಿದ್ದಾರೆ. ನಾಡಿನಲ್ಲಿ ವೈಚಾರಿಕ ಸಾಹಿತ್ಯ ಪರಂಪರೆಗೆ ಬಹಳಷ್ಟು ಕೊಡುಗೆ ನೀಡಿರುವವರು ನೀವು. ವೈಚಾರಿಕ ಸಾಹಿತ್ಯ ರಚನೆಗೆ ನೀವು ತೊಡಗಿಕೊಂಡಿದ್ದಕ್ಕೆ ಕಾರಣಗಳೇನಿತ್ತು?  ನನಗೆ ನನ್ನ ಸುತ್ತಮುತ್ತಲಿನ ಸಮಾಜವು ಧರ್ಮನಿಷ್ಟತೆ, ಜಾತಿ ನಿಷ್ಠತೆಯ ಅಂಧಕಾರದಲ್ಲಿ ಬಳಲುತ್ತಿದೆ ಎನಿಸಿತ್ತು. ಕತೆ ಕವನಕಿಂತ ವೈಚಾರಿಕ ಸಾಹಿತ್ಯ ಜನರನ್ನು ಜಾಗೃತಗೊಳಿಸಬಲ್ಲದು ಎಂಬ ನಂಬಿಕೆ ನನ್ನದಾಗಿತ್ತು. ಹಾಗಾಗಿ ಜನರಿಗೆ ವಿಚಾರವನ್ನು ನೇರವಾಗಿ ತಲುಪಿಸಬೇಕೆಂಬ ಪ್ರೇರಣೆ ಉಂಟಾಯಿತು. ಜನರು ಯಾವುದನ್ನು ಅತ್ಯಂತ ಪವಿತ್ರ, ಪೂಜ್ಯ ಎಂದು ತಿಳಿದಿದ್ದರೋ ಅದರ ಮೂಲ ಪರಿಕಲ್ಪನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದಲೇ ಅನೇಕ ಲೇಖನಗಳನ್ನು ಬರೆಯುತ್ತಾ ಹೋದೆ. ನನ್ನಲ್ಲಿ ವೈಚಾರಿಕ ಪ್ರಜ್ಞೆ ಬೆಳೆಯಲು ಕಾರಣ ಜನಪದರು. ಅವರ ನುಡಿ, ಬದುಕಿನ ಪ್ರೀತಿ, ಸ್ಥಾವರ ನಿರಾಕರಣದ ಪ...

ನಾಡಿನ ಪ್ರಗತಿಯಲ್ಲಿ GIMಗಳ ಪಾತ್ರವಿದೆಯೇ?

ಇಮೇಜ್
ಮತ್ತೊಂದು ವಿಶ್ವ ಹೂಡಿಕೆದಾರರ ಸಮ್ಮೇಳನ ನಡೆಯುತ್ತಿದೆ. ಸರ್ಕಾರದ ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿಯವರು ಈಗ ಮತ್ತೊಮ್ಮೆ ದೇಶ ವಿದೇಶಗಳಲ್ಲೆಲ್ಲ ಸುತ್ತಿ ಬಂದು ರಾಜ್ಯದಲ್ಲಿ ಬಂಡವಾಳ ಹೂಡಲು ವಿದೇಶಿ ಬಂಡವಾಳಿಗರಿಗೆ ರತ್ನಗಂಬಳಿ ಹಾಸಿದ್ದಾರೆ. ಈ ಸಲ ೫ ಲಕ್ಷ ಕೋಟಿ ಬಂಡವಾಳ, ೧೦ ಲಕ್ಷ ಉದ್ಯೋಗ ಮತ್ತು ೨೦೨೦ರೊಳಗೆ ರಾಜ್ಯದ ಒಟ್ಟು ಉತ್ಪನ್ನ ದ್ವಿಗುಣಗೊಳ್ಳಬೇಕೆನ್ನುವ ಮಹತ್ವಕಾಂಕ್ಷೆಯನ್ನು ಕೈಗಾರಿಕಾ ಸಚಿವರು ಮತ್ತು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ವ್ಯಕ್ತಪಡಿಸಿದ್ದಾರೆ. ಅಮೆರಿಕದ ಭಾರೀ ಉದ್ದಿಮೆಪತಿ ವಾರನ್ ಬಫೆಟ್ ಅವರನ್ನೇ ಈ ಸಲ ಕರೆದು ಕೂರಿಸಲಾಗುವುದು ಎಂದು ಹೇಳಿಕೆ ನೀಡಿದ್ದರೂ ಅವರು ಒಪ್ಪಲಿಲ್ಲವೋ ಏನು ಕತೆಯೋ ಕೊನೆಗೆ ಜಪಾನು ಜರ್ಮನಿಗಳ ಉಪಸಚಿವ, ಉಪಪ್ರಧಾನಿಗಳ ಉಪಸ್ಥಿತಿಗೇ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ನಮ್ಮ ಸರ್ಕಾರಗಳು ಕಳೆದ ೧೨ ವರ್ಷಗಳಿಂದ ಈ ವಿಶ್ವ ಹೂಡಿಕೆದಾರರ ಸಮ್ಮೇಳನಗಳನ್ನು (ಜಿಮ್) ಸಂಘಟಿಸುತ್ತಲೇ ಬಂದಿವೆ. ಮೊದಲ ಜಿಮ್ ೨೦೦೦ರ ಜೂನ್ ತಿಂಗಳಿನಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ನಾಯಕತ್ವದಲ್ಲಿ ಆಯೋಜನೆಗೊಂಡು ಆಗ ೧೩,೦೦೦ ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆ ಒಪ್ಪಂದಗಳಾಗಿದ್ದರೆ ಯಡಿಯೂರಪ್ಪನವರು ಹಾಗೂ ಮುರುಗೇಶ್ ನಿರಾಣಿಯವರು ಆಯೋಜಿಸಿದ್ದ  ಕಡೆಯ ೨೦೧೦ರ ಜಿಮ್ ನಲ್ಲಿ ಸುಮಾರು ೫ ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಒಪ್ಪಂದಗಳಾಗಿತ್ತು. ಹೀಗೆ ನಿರಂತರವಾಗಿ ನಡೆಸಿಕೊಂಡ...

ಮನಸ್ಸನ್ನು ತೇವಗೊಳಿಸುವ ”ನಡುವೆ ಸುಳಿವಾತ್ಮನ ಬದುಕು-ಬಯಲು’

ಇಮೇಜ್
"ಅಮ್ಮಾ ನನಗ್ಯಾಕೆ ಈ ಸಂಕಟ? ಯಾಕೆ ಇಂತ ಪರೀಕ್ಷೆಗೆ ನನ್ನ ಒಳಪಡಿಸ್ತಿದೀಯ? ನಿನ್ನ ನಂಬಿದವರಿಗೆ ಎಲ್ಲವನ್ನೂ ನೀನು ಕೊಡ್ತೀಯ ಅಂತಾರೆ. ಆದರೆ ನನಗೆ ನೀನು ಕೊಟ್ಟಿರೋದು ನೀನು ಬರೀ ನೋವನ್ನಷ್ಟೆ. ನಾನು ಮಾಡಿರೋ ತಪ್ಪಾದರೂ ಏನು? ಗಂಡಸಿನ ರೂಪದಲ್ಲಿ ಹೆಣ್ಣಿನ್ ಭಾವನೆ ತುಂಬಿ ಸೃಷ್ಟಿ ಮಾಡಿರೋಳು ನೀನೇ. ನಿನ್ನ ತಪ್ಪಿಗೆ ನಿನ್ನದೇ ದೇವಸ್ಥಾನದಲ್ಲಿ ನನಗೆ ಶಿಕ್ಷೆಯಾಗುತ್ತಿದೆ. ನೀನು ಹೆಣ್ಣಲ್ವ? ಇನ್ನೊಂದು ಹೆಣ್ಣಿನ ಭಾವನೆ ನಿನಗೆ ಅರ್ಥ ಆಗಲ್ವ? ನಿನಗೆ ಕನಿಕರ ಇಲ್ವಾ? ಮುಂದಿನ ವರ್ಷ ಇದೇ ದಿನದ ಹೊತ್ತಿಗೆ ನಿನ್ನ ಹಾಗೆ ನನ್ನನ್ನೂ ಹೆಣ್ಣಾಗಿ ಮಾಡ್ಬೇಕು. ಆಗಲಿಲ್ಲ ಆಂದ್ರೆ ಪೂರ‍್ತಿ ಗಂಡಸಾಗಿಯಾದ್ರೂ ಮಾಡೇ....." ಎಂದು ದೊರೈಸ್ವಾಮಿಯನ್ನು  ಸಮಯಾಪುರದ ದೇವಸ್ಥನದಲ್ಲಿ ಆತನ ತಲೆಗೂದಲನ್ನು ಬೋಳಿಸುವಾಗ ನೋವು, ಹತಾಶೆ, ಸಿಟ್ಟಿನಿಂದ ಹೇಳಿಕೊಂಡ ಮಾತುಗಳನ್ನು ರಂಗದ ಮೇಲೆ ಕೇಳಿದ ನಮಗೆಲ್ಲಾ ಇಷ್ಟು ದಿನದ ನಮ್ಮ ಅರಿವಿನ ಮೂಲಗಳೆಲ್ಲಾ ಪತರಗುಟ್ಟಿದಂತಹ ಅನುಭವ. ಕಿಕ್ಕಿರಿದ ಪ್ರೇಕ್ಷಕರ ಎದುರು ನೆನ್ನೆ ಶಿವಮೊಗ್ಗದ ಡಿ.ವಿ.ಎಸ್. ರಂಗಮಂದಿರಲ್ಲಿ ಪ್ರದರ್ಶನವಾದ ’ನಡುವೆ ಸುಳಿವಾತ್ಮನ ಬದುಕು-ಬಯಲು’ ನಾಟಕದ ಒಂದು ದೃಶ್ಯ ಇದು. ಶಿವಮೊಗ್ಗದ ಕ್ರಿಯಾಶೀಲ ರಂಗ ಸಂಘಟನೆಯಾದ ’ರಂಗ ಬೆಳಕು’ ತಂಡವು ಆಯೋಜಿಸಿದ್ದ ಹೆಗ್ಗೋಡಿನ ’ಜನಮನದಾಟ’ ತಂಡದ ಈ ನಾಟಕ ಎ.ರೇವತಿಯವರ ಟ್ರೂತ್ ಎಬೌಟ್ ಮಿ- ಎ ಹಿಜ್ರಾ ಲೈಫ್’ ಕೃತಿಯ ಅನುವಾದಿತ ಕೃತಿಯಾದ...