ಪೋಸ್ಟ್‌ಗಳು

ಜುಲೈ, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

"ನಮ್ಮ ಸಾಹಿತ್ಯ ವಿಮರ್ಶೆಯ ಮಾನದಂಡಗಳೇ ಪ್ರಶ್ನಾರ್ಹವಾಗಿವೆ": ಲಕ್ಷ್ಮಣ ಕೊಡಸೆ

ಇಮೇಜ್
ಪ್ರಜಾವಾಣಿಯಂತಹ ಪತ್ರಿಕೆಯಲ್ಲಿ ವರದಿಗಾರನ ಹುದ್ದೆಯಿಂದ ಮೊದಲುಗೊಂಡು ಸಹ ಸಂಪಾದಕ ಹುದ್ದೆಯವರಗೆ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿ ಅಪಾರ ಅನುಭವ ಪಡೆದವರು ಲಕ್ಷ್ಮಣ ಕೊಡಸೆಯವರು. ಮೂರು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಕತೆ, ಕಾದಂಬರಿ ಮುಂತಾದ ಪ್ರಕಾರಗಳಲ್ಲಿಯೂ ನಿರಂತರವಾಗಿ ತೊಡಗಿಸಿಕೊಂಡಿರುವ ಅವರು ಇದೀಗ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಇಂದಿನ ಪತ್ರಿಕೋದ್ಯಮ, ಸಮಾಜ, ಸಾಹಿತ್ಯ, ರಾಜಕೀಯ ಇತ್ಯಾದಿಗಳ ಕುರಿತು ಹರ್ಷಕುಮಾರ್ ಕುಗ್ವೆ  ದ ಸಂಡೆ ಇಂಡಿಯನ್ ಗಾಗಿ ನಡೆಸಿದ ಸಂದರ್ಶನ  ಇಲ್ಲಿದೆ. ಸುದೀರ್ಘ ಅವಧಿಯ ಪತ್ರಕರ್ತ ವೃತ್ತಿಯ ನಂತರದಲ್ಲಿ ನಿವೃತ್ತಿ ಹೊಂದಿರುವುದು ಏನನ್ನಿಸುತ್ತಿದೆ?  ಆರ್ಥಿಕ ದೃಷ್ಟಿಯಿಂದ ಕೆಲಸ ಮುಂದುವರೆಸಲೇ ಬೇಕಾದ ಅಗತ್ಯ ನನಗೆ ಇನ್ನು ಇರಲಿಲ್ಲ. ಪತ್ರಿಕೋದ್ಯಮವೂ ಇತರ ವೃತ್ತಿಗಳಂತೆ ಒಂದು ವೃತ್ತಿಯಾದ್ದರಿಂದ ಅದನ್ನು ಮುಗಿಸಿ ಬೇರೆ ಜೀವನವನ್ನು ನಾವು ರೂಪಿಸಿಕೊಳ್ಳಬೇಕಾಗುತ್ತದೆ. ಪತ್ರ್ರಕರ್ತನಾದವನು  ಸಾಯುವವರೆಗೂ ಪತ್ರಕರ್ತನೇ ಎಂಬ ಭಾವನೆ ಜನರಲ್ಲಿಯೂ, ಕೆಲ ಪತ್ರಕರ್ತರಲ್ಲಿಯೂ ಇದೆ. ಹಾಗಿರಬೇಕಾಗಿಲ್ಲ. ಕಳೆದ 30-35 ವರ್ಷ ಪೂರ್ತಿ ಪತ್ರಿಕೋದ್ಯಮದಲ್ಲೇ ಮುಳುಗಿ ಹೋಗಿರುವುದರಿಂದ ಓದುವುದು ಸಾಕಷ್ಟು ಉಳಿದುಕೊಂದಿದೆ. ಸಾಕಷ್ಟು ಓದಲಿಕ್ಕಾಗದೇ ಅಪ್‌ಡೇಟ್ ಆಗಲಿಕ್ಕಾಗಲಿಲ್ಲ ಎಂಬ ಭಾವನೆ ನನಗಿದೆ. ಇಷ್ಟು ವರ್ಷಗಳ ಅನುಭವಗಳನ್ನು ಒ...

ಹಳ್ಳಿ ಹೈದನ ತಲೆಕೆಡಿಸಿದವರಾರು?

ಇಮೇಜ್
ಮೈಸೂರು- ಮಾನಂತವಾಡಿ ಮಾರ್ಗದಲ್ಲಿ ನಾಗರಹೊಳೆ ಅಭಯಾರಣ್ಯದ ಕಾಕನಕೋಟೆ ಕಾಡಿನ ನಡುವೆ ಇರುವ ಆ ಜೇನುಕುರುಬರ ಹಾಡಿಯ ಹೆಸರು ಬಳ್ಳೇ ಹಾಡಿ . ಈ ಹಾಡಿಯ ಕೃಷ್ಣಪ್ಪ ಮತ್ತು ಲಕ್ಷ್ಮಿ ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳು. ಒಬ್ಬ ಗಂಡುಮಗ. ಆತ ರಾಜೇಶ. ಇಂದು ಸುವರ್ಣ ವಾಹಿನಿಯ ಹಳ್ಳಿ ಹೈದ ಪ್ಯಾಟೆಗ್ ಬಂದ ರಿಯಾಲಿಟಿ ಶೋನಲ್ಲಿ ಗ್ರಾಂಡ್ ಫಿನಾಲೆವರೆಗೂ ಹೋಗಿ ವಿಜಯಿಯಾಗಿ ಬಂದು ನಂತರದಲ್ಲಿ ಇನ್ನೂ ಬಿಡುಗಡೆಯಾಗದ 'ಜಂಗಲ್ ಜಾಕಿ’ ಸಿನಿಮಾದಲ್ಲಿ ಐಶ್ವರ್ಯಳೊಂದಿಗೆ ನಟಿಸಿ, ಇದೀಗ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮಾನಸಿಕ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ’ಹಳ್ಳಿ ಹೈದ’ನೇ ಈ ರಾಜೇಶ. ಕೆ.ಆರ್. ಆಸ್ಪತ್ರೆಯ ವೈದ್ಯರಾದ ಸುಧೀರ್ ಅವರು ಟಿಎಸ್‌ಐಗೆ ನೀಡಿದ ಮಾಹಿತಿಯ ಪ್ರಕಾರ ರಾಜೇಶ್‌ಗೆ ’ಅಕ್ಯೂಟ್ ಮೇನಿಯಾ’ ಅಟ್ಯಾಕ್ ಅಗಿದೆ. ಇದೊಂದು ರೋಗವೇನಲ್ಲ. ಆದರೆ ಮನಸ್ಸಿನಲ್ಲಿ ಉಂಟಾದ ತೀವ್ರ ಮಾನಸಿಕ ತಳಮಳ, ಹೊಯ್ದಾಟಗಳು ಒಬ್ಬ ವ್ಯಕ್ತಿಗೆ ಈ ಮಾನಸಿಕ ಅಸ್ವಸ್ಥತೆಯ್ನನು ಉಂಟು ಮಾಡುತ್ತದೆ ಎನ್ನುತ್ತಾರವರು. ಕಾಡಿನ ಹಾಡಿಯಲ್ಲಿ ತನ್ನ ಗೆಣೆಕಾರರೊಂದಿಗೆ ಸ್ವಚ್ಛಂದವಾಗಿ ಆಡಿಕೊಂಡಿದ್ದ ಜೇನುಕುರುಬರ ಹುಡುಗನೊಬ್ಬನಿಗೆ ಇಂತಹ ಪರಿಸ್ಥಿತಿ ಬರಲು ಕಾರಣಗಳೇನು? ಯಾರು ರಾಜೇಶನ ಇಂದಿನ ಈ ಸ್ಥಿತಿಗೆ ಕಾರಣರಾರು?  ಅದು ೨೦೧೦ನೇ ಇಸವಿಯ ಮೇ ತಿಂಗಳಿನಲ್ಲಿ ಸುವರ್ಣ ವಾಹಿನಿಯು ’ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಎಂಬ ರಿಯಾಲಿಟಿ ಶೋ ಸಾಕಷ್...