ಪೋಸ್ಟ್‌ಗಳು

ಆಗಸ್ಟ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Sign Petition For Democracy

Change.org | The Proven Petition Site

ಸಾಮಾಜಿಕ ನ್ಯಾಯವನ್ನು ಬಲಿಪಶು ಮಾಡುವುದು ಸಲ್ಲದು- ಡಾ. ಎಚ್. ಎಸ್. ರಾಘವೇಂದ್ರ ರಾವ್

ಇಮೇಜ್
  ನಮ್ಮಲ್ಲಿ ಹಿಂದೆಂದಿಗಿಂತ ಅಪಾರ ಪ್ರಮಾಣದ ಸಾಹಿತ್ಯ ಸೃಷ್ಟಿಯಾಗುತ್ತಿದೆ. ಇದರಲ್ಲಿ ಮೌಲ್ಯಯುತ ಸಾಹಿತ್ಯ ಎಷ್ಟರ ಮಟ್ಟಿಗೆ ಬರುತ್ತಿದೆ?  ಇದಕ್ಕೆ ನಾಲ್ಕೇ ಪುಸ್ತಕಗಳು ಪ್ರಕಟವಾಗುತ್ತಿದ್ದಾಗ ಸುಲಭವಾಗಿ ಹೇಳಬಹುದಿತ್ತು. ಆದರೆ ನಾನ್ನೂರು ಪುಸ್ತಕಗಳು ಬರುತ್ತಿರುವಾಗ ಕಷ್ಟ. ಅನೇಕ ಸಲ ಓದದೆಯೇ ತೀರ್ಮಾನ ಕೊಡುತ್ತೇವೆ. ವಯಸ್ಸಾಗುತ್ತಾ ಹೋದ ಹಾಗೆ ಇತ್ತೀಚಿನ ಬರೆಹಗಳ ಬಗ್ಗೆ ಒಂದು ಬಗೆಯ ಅಸಹನೆಯನ್ನು ಕೆಲವರು ವ್ಯಕ್ತಪಡಿಸುತ್ತಾರೆ. 70ರ ದಶಕದಲ್ಲಿ ವಿಮರ್ಶೆ ಬರೆಯಲು ಆರಂಭಿಸಿದ್ದವರಿಗೆ ೨೦೧೦ರಲ್ಲಿ ಬಂದ ಸಾಹಿತ್ಯವೂ ಅಷ್ಟೇ ಮುಖ್ಯ ಎಂಬ ಮುಕ್ತ ಮನಸ್ಸು ಇರದಿದ್ದರೆ ಈಗಿನದೇನನ್ನೂ ಓದದೇ ಆದೇ ಕುವೆಂಪು ಅದೇ ಬೆಂದ್ರೆ ಎಂದುಕೊಂಡು ಕೂತಿರಬೇಕಾಗುತ್ತದೆ.  ಬದಲಿಗೆ ನಮ್ಮ ಕಾಲದಲ್ಲಿ ಬರುತ್ತಿರುವುದರಲ್ಲಿಯೂ ಒಳ್ಳೆಯದಿರುತ್ತದೆ ಎಂಬ ತಿಳುವಳಿಕೆ ಬೇಕು. ಕಸಕಡ್ಡಿ ಎನ್ನುವುದು ಎಲ್ಲಾ ಕಾಲದಲ್ಲಿಯೂ ಇದ್ದೇ ಇರುತ್ತದೆ. ಹಿಂದೆಯೂ ಇತ್ತು. ನಾಗವೇಣಿಯವರ ’ಗಾಂಧಿ ಬಂದ’, ಮೊಗಳ್ಳಿಯವರ ಬುಗುರಿ ಇಂತವೆಲ್ಲ ಎಷ್ಟೊಂದು ಶ್ರೇಷ್ಟವಾದವುಗಳಿವೆಯಲ್ಲ. ಅಮರೇಶ ನುಗಡೋಣಿ, ಎಚ್.ಎಸ್.ಶಿವಪ್ರಕಾಶ್, ನಾರಾಯಣಸ್ವಾಮಿ ಮುಂತಾದವರು ಅದ್ಭುತವಾಗಿ ಬರೆಯುತ್ತಿದ್ದಾರೆ. ಇದೇ ಹೊತ್ತಿಗೆ ಬರೆದಿದ್ದೆಲ್ಲವೂ ಸಾಹಿತ್ಯ ಎಂದು ಹೇಳಲೂ ಬರುವುದಿಲ್ಲ. ಇಂದು ಇರುವ ಒಂದು ದೊಡ್ಡ ಅಪಾಯ ಎಂದರೆ ಕೀರ್ತಿ ಅಥವಾ ಗುರುತಿಸುವಿಕೆ ಬಹಳ ಬೇಗ ಸಿಗುತ್ತಿರುವುದ...