ಪೋಸ್ಟ್‌ಗಳು

ಸೆಪ್ಟೆಂಬರ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

"ಭೂಮಿ ಮತ್ತು ರಂಗಭೂಮಿ ಎರಡೂ ಅತಂಕದಲ್ಲಿವೆ"- ಚಿದಂಬರರಾವ್ ಜಂಬೆ

ಇಮೇಜ್
ನಾಡಿನ ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆಯವರ ಕೊಡುಗೆ ಅಪಾರವಾದದ್ದು. ಹೆಗ್ಗೋಡಿನ ನೀನಾಸಂ, ಮೈಸೂರಿನ ರಂಗಾಯಣ ಮತ್ತು ಸಾಣೆಹಳ್ಳಿಯ ಶಿವಸಂಚಾರ ಈ ಮೂರೂ ಪ್ರಮುಖ ರಂಗಶಾಲೆಗಳಲ್ಲಿ ಅತ್ಯಮೂಲ್ಯ ಕೊಡುಗೆ ನೀಡಿರುವ ರಂಗನಿರ್ದೇಶಕ ಮತ್ತು ಚಿಂತಕ ಚಿದಂಬರರಾವ್ ಜಂಬೆಯವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ.  (ಚಿತ್ರಗಳು-ಹರ್ಷಕುಮಾರ್ ಕುಗ್ವೆ) ಆಧುನಿಕ ರಂಗಭೂಮಿಯ ಇಂದಿನ ಟ್ರೆಂಡ್ ಏನಾಗಿದೆ? ಈ ’ಆಧುನಿಕತೆ’ ಎನ್ನುವುದನ್ನೇ ಆಲೋಚನೆ ಮಾಡಬೇಕಾಗಿದೆ. ಏಕೆಂದರೆ ಇಂದು ಆಧುನಿಕತೆ ಎಂದು ಕರೆಯುವುದು ಕೇವಲ ತಾಂತ್ರಿಕವಾಗಿಯೇ ವಿನಃ ವಸ್ತುಸಂವಿಧಾನದಲ್ಲಿ ಆದಂತಹ ಬದಲಾವಣೆಗಳನ್ನು ಇಟ್ಟುಕೊಂಡು ನಾವು ಆಧುನಿಕತೆಯನ್ನು ನೋಡುತ್ತಿಲ್ಲ. ಈಗ ತಾಂತ್ರಿಕವಾಗಿ ಅಷ್ಟೇನು ಬದಲಾವಣೆಗಳು ಆಗಿಲ್ಲ ಎಂಬುದು ನನ್ನ ಅಭಿಪ್ರಾಯ. ವಸ್ತು ಸಂವಿಧಾನದಲ್ಲಿ ಕೂಡ ಹೇಳಿಕೊಳ್ಳುವಂತಹಾ ಬಹಳಷ್ಟು ಏನೂ ಬಂದಿಲ್ಲ. ಇಂದು ಆಧುನಿಕ ಅಂದರೆ ಜಾಗತಿಕರಣದ ವೇಗದಲ್ಲಿ ಹೋಗುತ್ತಿರುವುದರಿಂದ ಅದನ್ನೇ ಆಧುನಿಕತೆ ಎನ್ನುವ  ಸ್ಥಿತಿಗೆ ನಾವು ಬಂದು ಬಿಟ್ಟಿದ್ದೇವೆ. ವಾಸ್ತವದಲ್ಲಿ ಅದು ಆಧುನಿಕತೆಯಲ್ಲ. ಅದರ ಹೊರತಾಗಿ ಜಾಗತಿಕರಣವನ್ನು ನಿರಾಕರಣೆ ಮಾಡುವಂತಾದ್ದು ಅಥವಾ ಆ ವೇಗಕ್ಕೆ ಸಿಲುಕಿಕೊಳ್ಳದೇ ಇರುವ ಯಾವುದಾದರೂ ಒಂದು ಮಾರ್ಗವಿದ್ದರೆ  ಅದನ್ನ ನಾವು ಆಧುನಿಕತೆ ಎಂದು ಕರೆಯಬಹುದು. ನಮ್ಮ ಪಾರಂಪರಿಕವಾದ ರಂಗಭೂಮಿಗೂ ಇಂದಿನ ರಂಗಭೂಮಿಗೂ ಭಿನ್ನತೆಗ...

ಕಸದ ವಿಷಚಕ್ರದೊಳಗೆ

ಇಮೇಜ್
ಕೃಪೆ: ದ ಸಂಡೆ ಇಂಡಿಯನ್, ಕನ್ನಡ ಕಳೆದ ಆಗಸ್ಟ್ ೨೩ ರಂದು ಬೆಂಗಳೂರಿನ ಉತ್ತರ ಭಾಗದಲ್ಲಿರುವ ಹೆಸರಘಟ್ಟ ಹೋಬಳಿಯ ಮಾವಳ್ಳಿಪುರದಲ್ಲಿ ಏಕಾಏಕಿ ಸುಮಾರು ೬೦೦ ಪೊಲೀಸರು ಜಮಾಸಿದ್ದರು. ಯಾರೋ ಉಗ್ರಗಾ"ಗಳು ಆ ಹಳ್ಳಿಯಲ್ಲಿ ಅಡಗಿಕೊಂಡಿದ್ದರು ಎಂದಲ್ಲ. ಬದಲಾಗಿ ಹಾಗೆ ಜಮಾಸಿದ್ದ ಪೊಲೀಸರೇ ಎರಡು ದಿನಗಳ ಕಾಲ ಹಳ್ಳಿಯಲ್ಲಿ ಉಗ್ರ ವಾತಾವರಣ ಸೃಷ್ಟಿಸಿಬಿಟ್ಟಿದ್ದರು. ಅಂದು ಬೆಳಿಗ್ಗೆ ಊರಿನ ಮುಖಂಡರಿಗೆ ಕರೆಮಾಡಿದ ಡಿವೈಎಸ್‌ಪಿ ಶ್ರೀಧರ್ ಮಾವಳ್ಳಿಪುರ ಕಸದ ಗುಡ್ಡೆಯ ಬಳಿ ಬರಲು ತಿಳಿಸಿದ್ದರು. ಮಾವಳ್ಳಿಪುರದ ಮೂರು ನಾಲ್ಕು ಜನರು ಅಲ್ಲಿಗೆ ಹೋದೊಡನೆ ಆ ಪೊಲೀಸ್ ಅಧಿಕಾರಿ ಊರಿಗೆ ಬರುವ ಕಸದ ಲಾರಿಗಳನ್ನು ತಡೆಯುವುದೇಕೆ ಎಂದು ಧಮಕಿ ಹಾಕಿದರು. ಆಗ ಊರಿನವರು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಒಂದು ತಿಂಗಳ ಹಿಂದೆಯೇ ಅಲ್ಲಿ ಕಸವನ್ನು ಹಾಕುವುದನ್ನು ನಿಲ್ಲಿಸಲು ತಿಳಿಸಿದೆ ಎಂದು ಆದೇಶ ಪತ್ರ ತೋರಿಸಿದರು. ಆದರೆ ಅದಕ್ಕೆ ಗಮನ ನೀಡದ ಪೊಲೀಸರು ಬಲವಂತವಾಗಿ ಕಸ ತುಂಬಿದ ಲಾರಿಗಳಿಗೆ ಅವಕಾಶ ನೀಡಿದಾಗ ತಕ್ಷಣಕ್ಕೆ 25-30 ಜನರು ನೆರೆದು ಪೊಲೀಸರೊಂದಿಗೆ ಮಾತಿಗಿಳಿದರು. ಇಷ್ಟರಲ್ಲಿ ಏಕಾಏಕಿ ವಾಹನಗಳಲ್ಲಿ ಬಂದ ೬೦೦ ರಷ್ಟು ಪೊಲೀಸರು ಭಯಭೀತ ವಾತಾವರಣವನ್ನೇ ಹುಟ್ಟಿಸಿಬಿಟ್ಟರು.  ಆದರೆ ಕಳೆದೊಂದು ದಶಕದಿಂದಲೂ ಬೆಂಗಳೂರು ಬಿಸಾಡಿ ಕಳಿಸಿದ ಕಸವನ್ನು ಸುರಿಸಿಕೊಂಡು ಇನ್ನಿಲ್ಲದ ತೊಂದರೆಗಳನ್ನನುಭವಿಸಿರುವ ಗ್ರಾಮಸ್ಥರು ಸೋಲೊಪ್ಪಲು ಸಿ...

ವಿಶ್ವದ ಸಕಲ ಸಮಸ್ಯೆಗಳಿಗೂ ಉತ್ತರ ಬುದ್ಧನ ಚಿಂತನೆಯಲ್ಲಿದೆ- ಪ್ರೊ. ಕಾಳೇಗೌಡ ನಾಗವಾರ

ಇಮೇಜ್
ಬಂಡಾಯ ಸಾಹಿತ್ಯದಲ್ಲಿ ಗುರುತಿಸಿಕೊಂಡು ಅತ್ಯಂತ ಮೌಲ್ಯಯುತವಾದ ಸಾಹಿತ್ಯವನ್ನು ರಚಿಸಿರುವ ಪ್ರೊ. ಕಾಳೇಔಡ ನಾಡಿನ ಪ್ರಮುಖ ಸಾಹಿತಿ, ವಿಚಾರವಾದಿ ಮತ್ತು ಹೋರಾಟಗಾರರು. ಟಿಎಸ್‌ಐಗಾಗಿ ಹರ್ಷಕುಮಾರ್ ಕುಗ್ವೆ ಅವರೊಂದಿಗೆ ನಡೆಸಿದ ಸಂದರ್ಶನ ಇಲ್ಲಿದೆ.  ಜಗತ್ತಿನ ಮೊದಲ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿಕೊಂಡಿರುವ ನಾವು ಜಾನಪದ ಅಧ್ಯಯನದ ವಿಷಯದಲ್ಲಿ ಏನನ್ನು ನಿರೀಕ್ಷಿಸಬಹುದು? ಜಾನಪದ ಅಧ್ಯಯನ ಅನ್ನುವುದು ವಾಸ್ತವವಾಗಿ ಇಡೀ ಜನಸಮುದಾಯದ ಅನುಭವದ ಇತಿಹಾಸವನ್ನೇ ಹೇಳುತ್ತದೆ. ಅಲ್ಲಿ ಅಪರೂಪದ ಪ್ರಯೋಗಗಳಿವೆ; ಅಲ್ಲಿ ವ್ಯಕ್ತಿಗಿಂತ ಹೆಚ್ಚಾಗಿ ಸಮುದಾಯದ ಅನುಭವಗಳಿರುತ್ತವೆ. ನಮ್ಮ ಸಾಂಸ್ಕೃತಿಕ ಇತಿಹಾಸ, ಆಚರಣೆ, ಸಂಗೀತ ಇತ್ಯಾದಿ ಸಕಲ ವೈವಿಧ್ಯಗಳ ಆಗರವೇ ಜಾನಪದ. ಹೀಗಾಗಿಯೇ ಆಯಾಯಾ ದೇಶಗಳಲ್ಲಿ ವಿವಿಧ ಕಾಲಮಾನ, ಹವಾಗುಣಕ್ಕನುಗುಣವಾಗಿ, ಆಹಾರ ಪದ್ಧತಿ, ನಡೆನುಡಿ ವಿಚಾರಗಳಲ್ಲಿ ಪ್ರಯೋಗಶೀಲವಾಗಿ ಯಾವುದು ಹೆಚ್ಚು ಅರ್ಥಪೂರ್ಣ ಎಂದು ಮನುಷ್ಯ ಸದಾ ಹುಡುಕುತ್ತಿರುತ್ತಾನೆ. ಅದು ಅಕ್ಷರಸ್ತರ ಲೋಕಕ್ಕಿಂತ ಭಿನ್ನವಾದ ಪ್ರಾಮಾಣಿಕವಾದ ಅನುಭವ ಲೋಕ. ಆ ದೃಷ್ಟಿಯಿಂದ ಆಯಾ ದೇಶಗಳಲ್ಲಿ ತಜ್ಞರಾದವರು ಆ ಸಮಾಜವನ್ನು ಅರ್ಥಮಾಡಿಕೊಳ್ಳಲಿಕ್ಕಾಗಿ, ಜಾನಪದವನ್ನು ಜ್ಞಾನದ ಕಾರಣಕ್ಕಾಗಿ ಅಧ್ಯಯನಮಾಡುತ್ತಾರೆ. ಹಾಗೆಯೇ ನಮ್ಮ ಭಾರತದ ಸಂದರ್ಭದಲ್ಲಿ ಅಕ್ಷರಜ್ಞಾನ ಇರದಿದ್ದಾಗಲೂ ಸಮಾಜದ ಏಳಿಗೆಯನ್ನು ನಿರಂತರವಾಗಿ ಬಯಸುತ್ತಿದ್ದ ದೊಡ್ಡ...