ಪೋಸ್ಟ್‌ಗಳು

ಡಿಸೆಂಬರ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಡಿಸೆಂಬರ್ 21ನ್ನು ಕುರಿತ ಮಿಥ್‌ಗಳು

ಇಮೇಜ್
(೨೦೧೨ರಲ್ಲಿ ಪ್ರಳಯವಾಗುತ್ತದೆ ಎಂಬ ಅಪಕಲ್ಪನೆ ಮತ್ತು ಅಪಪ್ರಚಾರಗಳು ೨೦೦೯ರಲ್ಲಿ ಆರಂಭವಾದ ಸಂದರ್ಭದಲ್ಲಿ ಈ ಲೇಖನವು 'ಗೈಡ್' ಮಾಸಪತ್ರಿಕೆಯಲ್ಲಿ ಪ್ರಕಟವಾಗಿತ್ತು) ೨೦೧೨ರ ಡಿಸೆಂಬರ್ ೨೧ ರಂದು ಜಗತ್ತಿನ ಅಂತ್ಯವಾಗಲಿದೆ. ಭೂಗ್ರಹವು ಯಾವುದೋ ಒಂದು ರೀತಿಯಲ್ಲಿ ಭಾರೀ ಮಾರ್ಪಾಡಿಗೆ ಒಳಗಾಗಲಿದೆ. ಭೂಮಿಯ ಮೇಲಿನ ಬಹುಪಾಲು ಮನುಷ್ಯರು ನಾಶವಾಗಲಿದ್ದಾರೆ. ಭೂಖಂಡಗಳು ಪ್ರತ್ಯೇಕಗೊಳ್ಳಲಿವೆ, ಇಡೀ ಜಗತ್ತೇ ಅಲ್ಲೋಲ ಕಲ್ಲೋಲವಾಗುತ್ತದೆ. ಆ ದಿನವೇ ಡೂಮ್ಸ್ ಡೇ ೨೦೧೨. ಅದು ಭೂಮಂಡಲದ ಅಂತ್ಯದ ದಿನ..... ಈ ಬಗೆಯ ಊಹಾಪೋಹಗಳು ಈಗಾಗಲೇ ನಮ್ಮ ಇಡೀ ಜಗತ್ತಿನಾದ್ಯಂತ ವ್ಯಾಪಕವಾದ ಪ್ರಚಾರವನ್ನು ಪಡೆದುಕೊಂಡು ಬಿಟ್ಟಿವೆ. ಅದರ ಈ ಕುರಿತ ಸಾವಿರಾರು ಸಂಖ್ಯೆಯ ಅಂತರ್ಜಾಲ ತಾಣಗಳಿಂದ, ಟೀವಿ ಚಾನಲ್‌ಗಳ ಕಾರ್ಯಕ್ರಮಗಳ ಟಿಆರ್‌ಪಿ ಕಾರ್ಯಕ್ರಮಗಳಿಂದ, ಕೆಲವು ಧಾರ್ಮಿಕ ವ್ಯಕ್ತಿಗಳು ಬರೆದಿರುವ ಪುಸ್ತಕಗಳಿಂದ, ಹೀಗೆ ನಾನಾ ಮೂಲಗಳಿಂದ ಈ ತಥಾಕಥಿತ ಪ್ರಳಯದ ಕುರಿತ ವಿಷಯಗಳನ್ನು ಓದಿ, ಕೇಳಿ ಜನರು ತೀವ್ರ ಆತಂಕ, ಕುತೂಹಲಗಳಿಗೊಳಗಾಗಿದ್ದಾರೆ. ಬೆಂಗಳೂರಿನ ಹತ್ತಿರ ಚಿಕ್ಕಗುಬ್ಬಿಯಲ್ಲಿರುವ ಮಾನಸ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾಗಿರುವ ಕೃಷ್ಣಾನಂದ ಎಂಬ ಸ್ವಾಮಿ ೨೦೧೨ ನೇ ಇಸವಿಯಲ್ಲಿ ನಡೆಯಬಹುದಾದ ಘಟನೆಗಳನ್ನು ತಮ್ಮ ದಿವ್ಯದರ್ಶನದ ಸಹಾಯದಿಂದ, ೨೦೧೨-ಎಂಡ್ ಆರ್ ಬಿಗಿನಿಂಗ್ ಎಂಬ ಕೃತಿಯನ್ನು ಬರೆದಿದ್ದರು. ಉತ್ತರ ಕನ್ನಡ ಜಿಲ್ಲೆಯ ಜೋಯಿಡ ತಾ...