ಪೋಸ್ಟ್‌ಗಳು

ಮಾರ್ಚ್ 16, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮತ್ತೆ ಕಾಡಿದ ರಶೋಮನ್

ಇಮೇಜ್
ಕಳೆದ ಮಾರ್ಚ್ ೨ ರಂದು ನಡೆದ  ಬೆಂಗಳೂರಿನಲ್ಲಿ ನಡೆದ ವಕೀಲರು - ಪತ್ರಕರ್ತರು - ಪೊಲೀಸರ ನಡುವಿನ ವೃತ್ತಿಗಲಭೆ ನಿಧಾನಕ್ಕೆ ಜನಮಾನಸದಿಂದ  ದೂರಾಗತೊಡಗಿದೆ. ಅಂದು ಮೂರೂ ಕಡೆಯವರಿಗೆ ಉಂಟಾದ ದೇಹದ ಮೇಲಿನ ಗಾಯಗಳೂ ವಾಸಿಯಾಗುತ್ತಿವೆ. ತಲೆಗೆ ಹಾಕಿದ್ದ ಹೊಲಿಗೆಗಳೂ ಬಿಚ್ಚಲಾಗಿದೆ. ಆದರೆ ಅಂದು ಉಂಟಾದ ಮಾನಸಿಕ ಗಾಯಗಳು ಇನ್ನು ಹತ್ತು ವರ್ಷಗಳಾದರೂ ವಾಸಿಯಾಗಲಾರವು. ಸಮಾಜದಲ್ಲಿ ಅತ್ಯಂತ ಜವಾಬ್ದಾರಿ ಹೊಂದಿದ್ದ ಈ ವೃತ್ತಿಪರರ ನಡುವಿನ ಕಂದಕ ದಿನೇ ದಿನೇ ಬೆಳೆಯುತ್ತಲೇ ಹೋಗುತ್ತಿದೆ. ಅಂದಿನ ಘಟನೆ ಹೇಗೆ ನಡೆಯಿತೆಂದು ನೀವು ಪತ್ರಕರ್ತರಿಗೆ ಕೇಳಿದರೆ ಅವರು ಒಂದು ರೀತಿ ಮಾಧ್ಯಮಗಳ ಮೂಲಕ ಭಿತ್ತರಿಸಿದ್ದಾರೆ.  ವಕೀಲರು ತಮ್ಮ ಅಳಲನ್ನು ತಮ್ಮದೇ ರೀತಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಪೊಲೀಸರು ಕೂಡಾ ಮತ್ತೊಂದು ಬಗೆಯಲ್ಲಿ ಹೇಳುತ್ತಾರೆ. ಈ ಹೊತ್ತಿನಲ್ಲಿ ನನಗೆ ಮತ್ತೊಮ್ಮೆ ಕಾಡಿದ್ದು ಜಗತ್ಪ್ರಸಿದ್ಧ ನಿರ್ದೇಶಕ ಅಕಿರಾ ಕೊರೊಸಾವಾನ ರಶೋಮನ್ (೧೯೫೦ರಲ್ಲಿ ನಿರ್ಮಿಸಿದ್ದು) ಎಂಬ ಅದ್ಭುತ ಸಿನೆಮಾ. ಈ ಸಿನೆಮಾ ನೋಡಿರುವವರಿಗೆಲ್ಲಾ ನನ್ನ ಮಾತು ಅರ್ಥವಾಗಿರುತ್ತದೆ. ಕೊರೊಸಾವಾನ ಎಲ್ಲಾ ಸಿನಿಮಾಗಳಲ್ಲಿ ಬಹಳ ಸಲ ಮತ್ತೆ ಮತ್ತೆ ಕಾಡುವುದು ರಷೊಮನ್. ಯಾಕೆಂದರೆ ಮನುಷ್ಯನ ಸ್ವಾರ್ಥ ಮತ್ತು ಆಲೋಚನೆಯ ಮಿತಿಗಳನ್ನು ಆ ಸಿನೆಮಾದ ಕತೆ ಅನಾವರಣ ಮಾಡುವಷ್ಟು ಅದ್ಭುತವಾಗಿ ಬೇರೆ ಯಾವುದೂ ಮಾಡಲು ಅಸಾಧ್ಯವೆಂದು ನನ್ನ ಭಾವನೆ.  ರಶೋಮನ್ ...