ಪೋಸ್ಟ್‌ಗಳು

ಮೇ 17, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

"ಲೇಖಕನಾದವನು ತಾನು ಕಂಡ ಸತ್ಯವನ್ನು ಪರೀಕ್ಷಿಸುತ್ತಿರಬೇಕು" - ಡಾ. ನಟರಾಜ್ ಹುಳಿಯಾರ್

ಇಮೇಜ್
ಡಾ. ನಟರಾಜ್ ಹುಳಿಯಾರ್ ಅವರು ಕಥೆಗಾರರಾಗಿ, ವಿಮರ್ಶಕರಾಗಿ ಮತ್ತು ಅಂಕಣಕಾರರಾಗಿ ಚಿರಪರಿಚಿತರು. ಲೋಹಿಯಾ ಚಿಂತನೆಗಳನ್ನು ಕನ್ನಡಕ್ಕೆ ತರುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಇತ್ತೀಚೆಗಷ್ಟೇ ನಟರಾಜ್ ಹುಳಿಯಾರ್ ಅವರ ಮೂರು ದಶಕಗಳ ಕತೆಗಳ ಸಂಕಲನ ’ಮಾಯಾಕಿನ್ನರಿ’ ಹಾಗೂ ಸಾಂಸ್ಕೃತಿಕ ಬರಹಗಳ ಸಂಕಲನ ’ಗಾಳಿ ಬೆಳಕು’ ಬಿಡುಗಡೆಯಾಗಿವೆ. ಇದೀಗ ಹಲವು ವಿಚಾರಗಳನ್ನು ಕುರಿತು  ತಮ್ಮ ನಿಲುವುಗಳನ್ನು ಅವರು ಇಲ್ಲಿ ಹಂಚಿಕೊಂಡಿದ್ದಾರೆ.  ಸಾಹಿತ್ಯ ವಿಮರ್ಶೆಯನ್ನೂ ಬರೆದಿರುವ  ನೀವು ಸಾಹಿತ್ಯ ವಿಮರ್ಶೆ ಇಂದು ಪಡೆದುಕೊಂಡಿರುವ ಪ್ರಾಮುಖ್ಯತೆ ಬಗ್ಗೆ ಏನು ಹೇಳುತ್ತೀರಿ?  ಸಾಹಿತ್ಯ ಇರುವವರೆಗೂ ಸಾಹಿತ್ಯ ವಿಮರ್ಶೆ ಇರಲೇಬೇಕಾಗುತ್ತದೆ. ಸಾಹಿತ್ಯ ವಿಮರ್ಶೆ ಇಂದು ಬೇರೆಯದೇ ಸ್ವರೂಪ ತಾಳಿದೆ. ಇಂದು ಅದು ಸಾಹಿತ್ಯ ಸಿದ್ಧಾಂತವಾಗುವ ಕಡೆ ಹೊರಳಿಕೊಂಡಿದೆ. ಸಾಹಿತ್ಯವಿಮರ್ಶೆ ಒಂದು  ಸ್ವತಂತ್ರ ಚಿಂತನಾ ಕ್ರಮವೂ ಹೌದು. ಸಂಸ್ಕೃತಿವಿಮರ್ಶೆ ಚಾಲ್ತಿಗೆ ಬಂದಾದ ಮೇಲೆ ಸಾಹಿತ್ಯವಿಮರ್ಶೆ ಕೇವಲ ಕೃತಿಯೊಂದನ್ನು ಕುರಿತ  ವಿಮರ್ಶೆಯಾಗಿ ಉಳಿದಿಲ್ಲ. ಅದು ಸಂಸ್ಕೃತಿ, ನಾಗರಿಕತೆಗೆ ಸಂಬಂಧಿಸಿದ ವಿಶಾಲ ಪ್ರಶ್ನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಕೀರ್ತಿನಾಥ ಕುರ್ತಕೋಟಿಯಂಥವರು ಆರಂಭಿಸಿದ ಸಾಹಿತ್ಯ ವಿಮರ್ಶೆಗೂ ಇಂದಿನ ಸಾಹಿತ್ಯ ವಿಮರ್ಶೆಗೂ ವ್ಯತ್ಯಾಸ ಇಲ್ಲಿದೆ. ಹೀಗಾಗಿ ಇಂದಿನ ಸಾಹಿತ್ಯ ವಿಮರ್ಶೆ ಸಾಹಿತ...