ಪೋಸ್ಟ್‌ಗಳು

ಸೆಪ್ಟೆಂಬರ್ 13, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕಸದ ವಿಷಚಕ್ರದೊಳಗೆ

ಇಮೇಜ್
ಕೃಪೆ: ದ ಸಂಡೆ ಇಂಡಿಯನ್, ಕನ್ನಡ ಕಳೆದ ಆಗಸ್ಟ್ ೨೩ ರಂದು ಬೆಂಗಳೂರಿನ ಉತ್ತರ ಭಾಗದಲ್ಲಿರುವ ಹೆಸರಘಟ್ಟ ಹೋಬಳಿಯ ಮಾವಳ್ಳಿಪುರದಲ್ಲಿ ಏಕಾಏಕಿ ಸುಮಾರು ೬೦೦ ಪೊಲೀಸರು ಜಮಾಸಿದ್ದರು. ಯಾರೋ ಉಗ್ರಗಾ"ಗಳು ಆ ಹಳ್ಳಿಯಲ್ಲಿ ಅಡಗಿಕೊಂಡಿದ್ದರು ಎಂದಲ್ಲ. ಬದಲಾಗಿ ಹಾಗೆ ಜಮಾಸಿದ್ದ ಪೊಲೀಸರೇ ಎರಡು ದಿನಗಳ ಕಾಲ ಹಳ್ಳಿಯಲ್ಲಿ ಉಗ್ರ ವಾತಾವರಣ ಸೃಷ್ಟಿಸಿಬಿಟ್ಟಿದ್ದರು. ಅಂದು ಬೆಳಿಗ್ಗೆ ಊರಿನ ಮುಖಂಡರಿಗೆ ಕರೆಮಾಡಿದ ಡಿವೈಎಸ್‌ಪಿ ಶ್ರೀಧರ್ ಮಾವಳ್ಳಿಪುರ ಕಸದ ಗುಡ್ಡೆಯ ಬಳಿ ಬರಲು ತಿಳಿಸಿದ್ದರು. ಮಾವಳ್ಳಿಪುರದ ಮೂರು ನಾಲ್ಕು ಜನರು ಅಲ್ಲಿಗೆ ಹೋದೊಡನೆ ಆ ಪೊಲೀಸ್ ಅಧಿಕಾರಿ ಊರಿಗೆ ಬರುವ ಕಸದ ಲಾರಿಗಳನ್ನು ತಡೆಯುವುದೇಕೆ ಎಂದು ಧಮಕಿ ಹಾಕಿದರು. ಆಗ ಊರಿನವರು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಒಂದು ತಿಂಗಳ ಹಿಂದೆಯೇ ಅಲ್ಲಿ ಕಸವನ್ನು ಹಾಕುವುದನ್ನು ನಿಲ್ಲಿಸಲು ತಿಳಿಸಿದೆ ಎಂದು ಆದೇಶ ಪತ್ರ ತೋರಿಸಿದರು. ಆದರೆ ಅದಕ್ಕೆ ಗಮನ ನೀಡದ ಪೊಲೀಸರು ಬಲವಂತವಾಗಿ ಕಸ ತುಂಬಿದ ಲಾರಿಗಳಿಗೆ ಅವಕಾಶ ನೀಡಿದಾಗ ತಕ್ಷಣಕ್ಕೆ 25-30 ಜನರು ನೆರೆದು ಪೊಲೀಸರೊಂದಿಗೆ ಮಾತಿಗಿಳಿದರು. ಇಷ್ಟರಲ್ಲಿ ಏಕಾಏಕಿ ವಾಹನಗಳಲ್ಲಿ ಬಂದ ೬೦೦ ರಷ್ಟು ಪೊಲೀಸರು ಭಯಭೀತ ವಾತಾವರಣವನ್ನೇ ಹುಟ್ಟಿಸಿಬಿಟ್ಟರು.  ಆದರೆ ಕಳೆದೊಂದು ದಶಕದಿಂದಲೂ ಬೆಂಗಳೂರು ಬಿಸಾಡಿ ಕಳಿಸಿದ ಕಸವನ್ನು ಸುರಿಸಿಕೊಂಡು ಇನ್ನಿಲ್ಲದ ತೊಂದರೆಗಳನ್ನನುಭವಿಸಿರುವ ಗ್ರಾಮಸ್ಥರು ಸೋಲೊಪ್ಪಲು ಸಿ...