ಪೋಸ್ಟ್‌ಗಳು

2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಲೇಖಕ ಯಾವತ್ತೂ ಸತ್ಯವನ್ನು ಹೇಳಬೇಕು: ನಾ. ಡಿಸೋಜಾ.

ಇಮೇಜ್
  ( ಹಿರಿಯ ಸಾಹಿತಿ ನಾ. ಡಿಸೋಜಾ ಅವರೊಂದಿಗೆ ನಡೆಸಿರುವ ಸಂದರ್ಶನದ ಆಯ್ದ ಭಾಗ) ನೀವು ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶಿಸಿದ ಹಿನ್ನೆಲೆಯೇನು? ಹೇಗೆ ಬರವಣಿಗೆಯ ಗೀಳು ಹತ್ತಿಸಿಕೊಂಡಿರಿ? ಮೂಲತಃ ಕೊಂಕಣಿ ಭಾಷಿಕನಾದ ನನಗೆ ಮನೆಯಲ್ಲಿ ಓದುವ ವಾತಾವರಣವಿತ್ತು. ನಮ್ಮ ತಂದೆ ಸ್ಕೂಲಿನ ಮಾಸ್ತರರಾಗಿದ್ದರು. ಅವರು ತಮ್ಮ ಪುಸ್ತಕಗಳಲ್ಲಿ ಮಕ್ಕಳಿಗಾಗಿ ಸಣ್ಣ ಸಣ್ಣ ಪದ್ಯಗಳನ್ನು ಬರೆದಿಟ್ಟುಕೊಳ್ಳುತ್ತಿದ್ದರು. ದೋಣಿ ಸಾಗಲಿ, ಮುಂದೆ ಹೋಗಲಿ, ನಾ ಕಸ್ತೂರಿ ನೀ ಹೊಯ್ಸಳ ಹೀಗೆ. ನಾನು 6ನೇ ವಯಸ್ಸಿನಲ್ಲಿ ಮೊದಲು ಓದಿದ ಪುಸತಕ ಅದೇ. ನನ್ನ ತಾಯಿ ನನಗೆ ಕೊಂಕಣಿ ಪದ್ಯಗಳನ್ನು ಹೇಳುತ್ತಿದ್ದರು. ತಂದೆ ಕಥೆಗಳನ್ನು ಹೇಳುತ್ತಿದ್ದರು. ನಾನು ಬೆಳೆಯುವ ಪೂರ್ವದಲ್ಲಿಯೇ ಅಕ್ಕ-ಅಣ್ಣಂದಿರ ಎಲ್ಲಾ ಪುಸ್ತಕಗಳನ್ನೂ ಓದಿ ಬಿಟ್ಟಿದ್ದೆ. ಸಂಧ್ಯಾರಾಗ, ಇಜ್ಜೋಡು, ಮರಳಿ ಮಣ್ಣಿಗೆ ಮುಂತಾದವನ್ನು ಪ್ರಾಥಮಿಕ ತರಗತಿಗಳಲ್ಲೇ ತಿರುವಿಹಾಕಿದ್ದೆ. ಓದುತ್ತಾ, ಓದುತ್ತಾ ಬರೆಯಬೇಕೆನ್ನಿಸಿತು. ಬರಹಗಾರನಾದೆ. ಅತ್ಯುತ್ತಮ ಶಿಕ್ಷಕರು ಸಿಕ್ಕಿದರು. ಗೊರೂರು ರಾಮಸ್ವಾಮಿ ಅಯ್ಯಂಗಾರರ ಅಣ್ಣ ಗೊರೂರು ನರಸಿಂಹಾಚಾರ್ ಎನ್ನುವವರು ಸಾಗರದ ಹೈಸ್ಕೂಲಿನಲ್ಲಿ ನನಗೆ ಶಿಕ್ಷಕರಾಗಿದ್ದರು.ಕಾಲೇಜಿನಲ್ಲಿ ಜಿ.ಎಸ್.ಶಿವರುದ್ರಪ್ಪ ನನಗೆ ಉಪನ್ಯಾಸಕರಾಗಿದ್ದರು. ಹಾಗೇ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಯಿತು. ಹೊಸ ತಲೆಮಾರಿನವರ ಸಾಹಿತ್ಯ ಸೃಷ್ಟಿಯನ್ನು ನೋಡಿದಾಗ ನಿಮಗೇನನ್ನಿಸು...

ಆರೋಗ್ಯ ಕ್ಷೇತ್ರದ ಅನಾರೋಗ್ಯಕ್ಕೆ ಮದ್ದೇನು? : ಅಮೀರ್ ಖಾನ್ ಅಂಕಣ ಬರಹ

ಇಮೇಜ್
(ದ ಹಿಂದೂ ಪತ್ರಿಕೆಯಲ್ಲಿ ಈ ಬರಹ ಪ್ರಕಟವಾಗಿತ್ತು.) ನಾನೊಂಥರಾ ಕನಸುಗಾರ. ನಾವೆಲ್ಲರೂ ಸಹ ಬಡವರು, ಶ್ರೀಮಂತರೆಂಬ ಭೇಧವಿಲ್ಲದೆ ಎಲ್ಲರೂ ಒಂದೇ ಬಗೆಯ ಆರೋಗ್ಯ ಸೌಲಭ್ಯಗಳನ್ನು ಪಡೆಯುವಂತಹ ದಿನ ನಮ್ಮ ದೇಶದಲ್ಲಿ ಬರುತ್ತದೆ ಎನ್ನುವುದು ನನ್ನ ಕನಸು. ಅನೇಕರಿಗೆ ಇದೊಂದು ಬಗೆಯಲ್ಲಿ ಅವಾಸ್ತವವಾದ ಹಾಗೂ ಅಸಾಧ್ಯವಾದಂತಹ ಹುಚ್ಚುಕನಸು ಎನ್ನಿಸಬಹದು. ಆದರೆ ಇದು ಖಂಡಿತವಾಗಿಯೂ ಕಾಣಬೇಕಾದಂತಹ ಕನಸು ಹಾಗೂ ಇಂತಹ ಕನಸೊಂದು ನನಸಾಗಲೇಬೇಕೆನ್ನಲು ಕಾರಣಗಳಿವೆ ಎನ್ನುವುದು ನನ್ನ ನಂಬುಗೆ. ನೀವು ಬಡವರಿರಲಿ, ಶ್ರೀಮಂತರಿರಲಿ, ನಿಮ್ಮ ಪ್ರೀತಿಪಾತ್ರೊಬ್ಬರನ್ನು ಕಳೆದುಕೊಂಡಾಗ ಉಂಟಾಗುವ ದು:ಖ ದುಮ್ಮಾನಗಳಿಗೆ ಭಿನ್ನಭೇಧವಿರುವುದಿಲ್ಲ. ನನ್ನ ಮಗು ವಾಸಿಯಾಗದ ಖಾಯಿಲೆಗೆ  ತುತ್ತಾಗಿ ನರಳಿ ನರಳಿ ತೀರಿಕೊಳ್ಳುವಾಗ, ಆಗ ನನಗೇನೂ ಮಾಡಲು ಸಾಧ್ಯವಾಗದಿರುವಾಗ ನಿಜಕ್ಕೂ ದು:ಖವಾಗುತ್ತದೆ. ಆದರೆ ಆ ಮಗುವಿನ ಖಾಯಿಲೆಯನ್ನು ಗುಣಪಡಿಸಬಹದಾದ ಔಷಧವೊಂದಿದೆ ಎಂದು ತಿಳಿದೂ ನನಗೆ ಆ ಔಷಧಿಯನ್ನು ಕೊಳ್ಳಲಾಗದಿರುವ ಕಾರಣಕ್ಕೆ ನನ್ನ ಮಗುವು ನರಳಿ ಸಾಯುತ್ತದೆ ಎಂದಾದಾಗ, ಅದನ್ನು ನಾನು ನೋಡಿ ಸುಮ್ಮನಿರಬೇಕಾಗಿ ಬಂದಾಗ - ಅಂತಹ ಒಂದು ಸ್ಥಿತಿ ನಿಜಕ್ಕೂ ದುರಂತಮಯ. ಒಂದು ಒಳ್ಳೆಯ ಆರೋಗ್ಯ ಆರೈಕೆ ವ್ಯವಸ್ಥೆಯೊಂದು ನಮ್ಮಲ್ಲಿಲ್ಲದಿರುವಂತೆ ಮಾಡಿರುವ ಕಾರಣವಾದರೂ ಏನು? ನಾವು ಅಸಂಖ್ಯ ಜನರು ತೆರಿಗೆ ಕಟ್ಟುತ್ತೇವೆ. ಕೆಲವರು ಕಟ್ಟುವುದಿಲ್ಲ. ಹಾಗೆಯೇ ಬಹುತೇಕ ಜನರಿಗೆ ಪ್ರ...

"ಭ್ರಷ್ಟಾಚಾರಕ್ಕಿಂತಲೂ ದೊಡ್ಡ ವ್ಯಾಧಿ ಮತಾಂಧತೆ " -ಕೋ. ಚೆನ್ನಬಸಪ್ಪ

ಇಮೇಜ್
 ಕೋ.ಚೆ ಎಂದೇ ನಾಡಿನಲ್ಲಿ ಜನಜನಿತವಾಗಿರುವ ಕೋ. ಚೆನ್ನಬಸಪ್ಪ ಅವರು ವೃತ್ತಿಯಲ್ಲಿ ನ್ಯಾಯಾಧೀಶರಾಗಿ, ವಕೀಲರಾಗಿ ಕೆಲಸ ಮಾಡಿದ್ದರೂ ತಮ್ಮ ಲೇಖನಿಯ ಮೂಲಕ ನಿಜವಾದ ನ್ಯಾಯವಾದಿಗಳಾಗಿ ನಾಡಿನ ಸಾಕ್ಷಿಪ್ರಜ್ಞೆಯಾಗಿ ಬದುಕಿರುವಂತಹವರು. ಅವರು ಬರೆದ ಪ್ರತಿಯೊಂದು ಬರಹವೂ ಸಮಾಜದ ಒಳಿತಿನ ಆಶಯವನ್ನೇ ಹೊಂದಿರುವಂತಹುದು. ತಮ್ಮ ಬದುಕಿನ ೯೦ರ ಹರೆಯದಲ್ಲಿರುವ ಅವರನ್ನು ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು  ಸಹೃದಯರೆಲ್ಲರ ಪಾಲಿಗೆ ಸಂತಸದ ವಿಷಯ. ದ ಸಂಡೆ ಇಂಡಿಯನ್ ಗಾಗಿ ಹಲವಾರು ವಿದ್ಯಮಾನಗಳ ಕುರಿತು  ಕೋ.ಚೆ.ಯವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ.  ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕುರಿತು ಏನನ್ನಿಸುತ್ತಿದೆ? ನನ್ನ ಆಯ್ಕೆಯ ಕುರಿತು ಹೇಳುವುದಾದರೆ ಬಹುಶಃ ನನ್ನನ್ನು ಹೊರತುಪಡಿಸಿದ ಪಟ್ಟಿಯಲ್ಲಿದ್ದ ಇತರರಿಗೂ ನನ್ನ ಆಯ್ಕೆಯ ವಿಷಯದಲ್ಲಿ ತಕರಾರಿಲಿಲ್ಲ ಎಂದೆನಿಸುತ್ತದೆ. ಇದರಿಂದಾಗಿ ಪರಿಷತ್ತಿನ ಅಧ್ಯಕ್ಷರಿಗೂ ಸುಲಭವಾಯಿತು ಎಂದುಕೊಳ್ಳುತ್ತೇನೆ. ನಿಜಹೇಳಬೇಕೆಂದರೆ ನಾನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆ ಎಂದು ಕನಸು ಮನಸಿನಲ್ಲಿಯೂ ಯೋಚಿಸಿರಲಿಲ್ಲ. ಈ ಸ್ಥಾನವನ್ನು ಪಡೆಯಬಹುದು ಎಂದು ನನಗೆ ಎಂದೂ ಅನಿಸಿರಲಿಲ್ಲ. ಅದಕ್ಕಾಗಿ ನಾನು ಬರೆದೂ ಇಲ್ಲ. ಮತ್ತೆ ಈ ಸ್ಥಾನ ಬಹುತೇಕ ಶಿಕ್ಷಕ ಕ್ಷೇತ್ರದಿಂದ ಬಂ...