ಪೋಸ್ಟ್‌ಗಳು

2014 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

‘ರಾಂಗ್‌ನಂಬರ್’ಗಳ ಸಂತೆಯಲ್ಲಿ ನಿಂತು ರೈಟ್ ನಂಬರ್ ತೋರಿಸುವ ’pk’

ಇಮೇಜ್
“ ಹಮ್‌ಕಾ ಲಗಾತ್ ಹೈ ಬಗವಾನ್ ಸೆ ಬಾತ್ ಕರೇ ಕಾ ಕಮ್ಮುನಿಕೇಸನ್ ಸಿಸ್ಟಂ ಇಸ್ ಗೋಲಾ ಕಾ ಟೋಟಲ್ ಲುಲ್ ಹೋ ಚುಕಾ ಹೇ ” (ನಂಗನ್ಸೋ ಪ್ರಕಾರ ಈ ಬೂಮಿ ಮೇಲೆ ದೇವರ ಜೊತೆ ಮಾತಾಡೋ ಕಮ್ಯುನಿಕೇಶನ್ ಸಿಸ್ಟಂ ಪೂರಾ ಎಡವಟ್ಟಾಗಿದೆ) - pk ಸಿನಿಮಾದಲ್ಲಿ ಪಿಕೆ (ಅಮೀರ್ ಖಾನ್) ಹೇಳುವ ಮಾತು \ ಏಲಿಯನ್ ಅಂದರೆ ಅನ್ಯಗ್ರಹ ಜೀವಿಯೊಬ್ಬ ಒಂದು ಸಂಶೋಧನೆಗಾಗಿ ಭೂಮಿಯ ಬಂದು ಸೀದಾ ರಾಜಾಸ್ತಾನದ ಹಳ್ಳಿಯೊಂದರಲ್ಲಿ ಇಳಿದು ತಾನು ಬಂದ ಆಕಾಶಬಂಡಿಯ (ಸ್ಪೇಸ್‌ಕ್ರಾಪ್ಟ್) ರಿಮೋಟ್ ಕಂಟ್ರೋಲರ್ ಕಳೆದುಕೊಂಡುಬಿಡುತ್ತಾನೆ. ಅಲ್ಲಿಂದ ಶುರುವಾಗುತ್ತದೆ ಈ ಭಾರತ ಭೂಮಿಯ ಮಂದಿ-ಮಂದಿರಗಳ ನಡುವೆ ಅವನ ಪೀಕಲಾಟ. ಹೀಗೊಂದು ಕತೆಯನ್ನು ಹೆಣೆದು ಅದನ್ನೊಂದು ಅದ್ಭುತ ಸಿನಿಮಾ ಮಾಡಿ ಜನರ ಮುಂದಿಟ್ಟಿದೆ ರಾಜ್‌ಕುಮಾರ್ ಹಿರಾನಿ- ಅಭಿಜಿತ್ ಜೋಶಿ ಮತ್ತು ಬಾಲಿವುಡ್ ನಟ ಅಮೀರ್ ಖಾನ್ ಜೋಡಿ. ತ್ರೀ ಈಡಿಯಟ್ಸ್ ಸಿನಿಮಾದ ನಂತರ ಇದೀಗೆ ಅಂತಹದ್ದೇ ಒಂದು ಅದ್ಭುತ ಸಿನಿಮಾವನ್ನು ಹಿರಾನಿ-ಅಮೀರ್ ಜೋಡಿ ನೀಡಿದೆ. ಸಿನಿಮಾಗಳಿಂದ ಬರೀ ಮನರಂಜನೆಯಲ್ಲದೇ ಉತ್ತಮವಾದ ಸಂದೇಶಗಳನ್ನೂ ನಿರೀಕ್ಷಿಸುವವರು ಯಾವಕಾರಣಕ್ಕೂ ತಪ್ಪಿಸಿಕೊಳ್ಳಬಾರದ ಸಿನಿಮಾ pk . ಭೂಗೋಳದ ಮೇಲೆ ಬೆತ್ತಲೆಯಾಗಿ ಇಳಿದ ಸ್ವಲ್ಪ ಹೊತ್ತಿಗೇ ತನ್ನ ರಿಮೋಟ್ ಕಂಟ್ರೋಲರ್ ಕಳವಾಗಿ ಅದಕ್ಕಾಗಿ ಹುಡುಕುತೊಡಗುವ ಈ ಏಲಿಯೆನ್ ವರ್ತನೆಗಳನ್ನು ನೋಡಿ 'ತೂ ಪಿಕೆ ಹೈ ಕ್ಯಾ? ಎಂದು ಕೇಳುತ್ತಾರೆ. ಕೊನ...

ISIS ಭಯೋತ್ಪಾದನೆ ಮತ್ತು ಮದ್ಯಪ್ರಾಚ್ಯದ ರಕ್ತಚರಿತ್ರೆ!

ಇಮೇಜ್
ಕಳೆದೆರಡು ತಿಂಗಳ ಹಿಂದೆ ಇರಾಕಿನ ಪಟ್ಟಣಗಳಲ್ಲಿ ಧರ್ಮಾಂಧರು ನಡೆಸಿರುವ ಕ್ರೌರ್ಯವನ್ನು ನೋಡಿ ಜಗತ್ತು ಹೌಹಾರಿದೆ. ಒಂದೇ ಧರ್ಮದ ಆದರೆ ಬೇರೆಯ ಪಥದವರೆಂಬ ಕಾರಣಕ್ಕಾಗಿ ಜನರನ್ನು ಕೈಕಟ್ಟಿ ಸಾಲಾಗಿ ನಿಲ್ಲಿಸಿ ತಲೆಗೇ ಗುಂಡಿಟ್ಟು ಹೊಡೆದು ಕೊಲ್ಲುವ ದೃಶ್ಯಗಳನ್ನು ಜಗತ್ತಿನ ವೀಕ್ಷಣೆಗೆ ಬಿಡುಗಡೆಗೊಳಿಸಿದ ಆ ಕ್ರೂರಿ ಧರ್ಮಾಂಧ ಪಡೆಯ ಹೆಸರು ISIS (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ). ಇರಾಕಿನಲ್ಲಿರುವ ಶಿಯಾ ಮುಸ್ಲಿಮರಿಗೆ ಸಂಬಂಧಿಸಿದ ಪುರಾತನ ಐತಿಹಾಸಿಕ ಸ್ಮಾರಕಗಳನ್ನೂ, ಕ್ರೈಸ್ತ ದೇಗುಲಗಳನ್ನೂ ಪುಡಿಗಟ್ಟುತ್ತಾ ಚರಿತ್ರೆಯ ನೆನಪನ್ನೇ ಧ್ವಂಸಗೊಳಿಸುತ್ತ ನಡೆದಿದೆ ಈ ವಿಧ್ವಂಸಕ ಜಿಹಾದಿ ಪಡೆ. ಇರಾಕ್‌ನ ಮುಖ್ಯ ನಗರವಾದ ಮೋಸುಲ್‌ನ್ನು ವಶಪಡಿಸಿಕೊಂಡು ಅಲ್ಲಿನ ಕೇಂದ್ರ ಬ್ಯಾಂಕ್‌ನಲ್ಲಿನ ಸು.500 ದಶಲಕ್ಷ ಡಾಲರ್ ಹಣ ಮತ್ತು ಬೃಹತ್ ಪ್ರಮಾಣದ ಬಂಗಾರವನ್ನು ವಶಪಡಿಸಿಕೊಂಡಿದೆ. ಈಗ ಅದು ಕಡಿಮೆಯೆಂದರೂ 1200 ಕೋಟಿರೂಗಳ ಆಸ್ತಿ ಹೊಂದಿದೆಯೆಂದು ಹೇಳಲಾಗುತ್ತಿದೆ. ಈ ಧರ್ಮಾಂಧ ಪಡೆಯ ನಾಯಕ ಅಬು ಬಕ್ರಲ್ ಬಾಗ್ದಾದಿ ಕ್ರೂರತೆ ಮತ್ತು ಸಂಘಟನೆಯಲ್ಲಿ ಒಸಾಮಾ ಬಿನ್ ಲಾಡೆನ್ನನನ್ನೂ ಮೀರಿಸುವವಂತಹ ಕಟುಕ. ಈ ಹಿಂದೆ  ಆಲ್ ಖೈದಾದಲ್ಲೇ ಇದ್ದು ಅದರಿಂದ ಸಿಡಿದು ಬಂದವನು. ಇದೀಗ ಆಲ್‌ಖೈದಾವನ್ನೇ ಟೀಕಿಸುತ್ತ ಅದು ಹಾದಿ ತಪ್ಪಿದೆ ಎಂದೂ ತಾನೇ ನಿಜವಾದ ಜಿಹಾದ್ ನಡೆಸುತ್ತಿರುವೆನೆಂದೂ ತಿಳಿಸುತ್ತಾ ಬಂದಿರುವ ಈತ ಇರಾಕ್ ಮೇಲೆ ನಡೆಸಿದ ದಾ...

ಅನಂತಮೂರ್ತಿಯವರ ಚಿಂತನೆ - ಆಶಯಗಳು ನಮ್ಮನ್ನು ಎಚ್ಚರವಾಗಿಟ್ಟಿರಲಿ.

ಇಮೇಜ್
ತುಂಗ-ಭದ್ರೆಯರ ಉಳಿವಿಗಾಗಿನ ಆಂದೋಲನದಲ್ಲಿ ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ  ಮಾನವ ಸರಪಳಿ  ರಚಿಸಿದ್ದ ಸಂದರ್ಭ. ಮಾತನಾಡಲು  ನನ್ನ ಕೈಯಿಂದ ಮೈಕು ತೆಗೆದುಕೊಳ್ಳುತ್ತಿರುವ ಡಾ. ಯು. ಆರ್. ಅನಂತಮೂರ್ತಿಯವರು. ಚಿತ್ರದಲ್ಲಿ ನಾಡಿನ ಪ್ರಖರ ಆರ್ಥಿಕ ಚಿಂತಕರಾಗಿದ್ದ ದಿ. ಡಾ. ನಿ.ಮುರಾರಿ ಬಲ್ಲಾಳರನ್ನೂ ಕಾಣಬಹುದು.  ಅವು 2001ರ ದಿನಗಳು . ನನ್ನೂರು ಶಿವಮೊಗ್ಗೆಯಲ್ಲಿ ತುಂಗ - ಭದ್ರ ನದಿಗಳ ಮೂಲದ ಉದ್ದೇಶಿತ ಕುದುರೆಮುಖ ಗಣಿಗಾರಿಕೆಯನ್ನು ವಿರೋಧಿಸುವ ಜನಾಂದೋಲನ ಮತ್ತೊಮ್ಮೆ ಗರಿಗೆದರಿತ್ತು . ನಾವು ಒಂದಷ್ಟು ವಿದ್ಯಾರ್ಥಿಗಳು  ಈ ಚಳವಳಿಯ ಕಾರ್ಯಕರ್ತರಾಗಿ ಕಲ್ಕುಳಿ ವಿಠ್ಠಲ ಹೆಗ್ಡೆಯವರ ನೇತ್ರುತ್ವದಲ್ಲಿ   ಹಗಲು ರಾತ್ರಿಯೆನ್ನದೆ ಕೆಲಸ ಮಾಡುತ್ತಿದ್ದೆವು . ಕುದುರೆಮುಖದ ಪಕ್ಕದಲ್ಲಿರುವ ಗಂಗಡಿಕಲ್ಲು ಮತ್ತು ನೆಲ್ಲಿಬೀಡು ಕ್ರಮವಾಗಿ ತುಂಗೆ ಮತ್ತು ಭದ್ರೆಯರ ಮೂಲಸ್ಥಳಗಳು . ಆ ಎರಡೂ ಗುಡ್ಡಗಳಲ್ಲಿ ಗಣಿಗಾರಿಕೆಯನ್ನು ವಿಸ್ತರಿಸುವುದಾಗಿ ಮತ್ತು ಮುಂದಿನ 20 ವರ್ಷಗಳ ಕಾಲ ಜಪಾನಿನ ನಿಪ್ಪಾನ್ ಕಂಪನಿಗೆ ಹಂತಹಂತವಾಗಿ ಗಣಿಗಾರಿಕೆಯನ್ನು ವಿಸ್ತರಿಸುವುದಾಗಿ ರಾಜ್ಯ ಮತ್ತು ಕೆಂದ್ರ ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದವು . ಇದರ ವಿರುದ್ಧವಾಗಿ ತುಂಗಭದ್ರಾ ನದಿಗಳ ದಂಡೆಯ ಮೇಲಿನ ಎಂಟೂ ಜಿಲ್ಲೆಗಳಲ್ಲಿ ಹತ್ತು ವರ್ಷಗಳ ನಂ...