Manju |
Manju and Chitra |
ಮಂಜು ಕಳೆದ ಬುಧವಾರ ಅಂದರೆ ೩ ನೇ ತಾರೀಖು ಸಂಜೆ ಹೊತ್ತಿಗೆ ಕಾಲ್ ಮಾಡಿದ. ಅಂದು ನಮಗೆ ಎಡಿಷನ್ ದಿನವಾದ ಕಾರಣ ಆಹೋರಾತ್ರಿ ಕೆಲಸ. ಹೀಗಾಗಿ ಬ್ಯುಸಿ ಇದ್ದ ಕಾರಣ 'ಮಂಜೂ ಇವತ್ತು ಬ್ಯುಸಿ ಇದೀನಿ ನಾಳೆ ಕಾಲ್ ಮಾಡ್ತೀನಿ ಕಣೋ' ಎಂದು ಹೇಳಿ ಫೋನ್ ಇಟ್ಟು ನನ್ನ ಪಾಡಿಗೆ ಕೆಲಸದಲ್ಲಿ ತೊಡಗಿದೆ. ಆದರೆ ಮರುದಿನ ಅವನು ಕರೆ ಮಾಡಿದ್ದು ಮರೆತೇಬಿಟ್ಟಿದ್ದೆ.
ನೆನ್ನೆ ಮನೆಯಿಂದ ಅಪ್ಪ ನನಗೆ ಕರೆ ಮಾಡಿ 'ಹರ್ಷ, ಇವತ್ತು ಪ್ರಜಾವಾಣಿಯಲ್ಲಿ ಲೋಕಲ್ ಪೇಜಿನಲ್ಲಿ ಒಂದು ಸುದ್ದಿ ಬಂದಿದೆ. ಕೊಳಚೆಗಾರಿನಲ್ಲಿ ಮಂಜುನಾಥ ಎಂಬ ಹುಡುಗ ಸೂಸೈಡ್ ಮಾಡಿಕೊಂಡಿದಾನೆ ಅಂತಿದೆ. ಯಾರ ಅವ್ನು? ನಿನ್ನನ್ನು ಬಹಳ ಹಚ್ಚಿಕೊಂಡಿದ್ನಲ್ಲಾ ಅವನೇನಾ?' ಕೇಳಿದ್ರು. ಅಲ್ಲಿ ಮಂಜುನಾಥ ಎನ್ನುವ ಹುಡುಗ ಅವನನ್ನು ಬಿಟ್ರೆ ಬೇರೆ ಯಾರೂ ಇಲ್ಲ. ನೋಡ್ತೀನಿ ತಡಿ ಎಂದು ಇಟ್ಟವನೇ ಮಂಜು ನಂಬರ್ಗೆ ಕರೆ ಮಾಡಿದೆ. ಅದು ಸ್ವಿಚ್ ಆಫ್ ಆಗಿತ್ತು. ಕೊನೆಗೆ ಯಾವ್ಯಾವುದೋ ನಂಬರ್ಗೆಲ್ಲ ಮಾಡಿ ಕೊನೆಗೆ ಅವರಪ್ಪ ಸಿಕ್ಕಿದರು. "ಶಂಕ್ರಣ್ಣಾ ನಾನು ಕೇಳಿದ ಸುದ್ದಿ ನಿಜವಾ?'
ಅದಕ್ಕೆ ಅವರು,
ಹೌದು ಮಾರಾಯಾ, ಮೊನ್ನೆ ೫ ನೇ ತಾರೀಖು ಹೀಗೆ ಮಾಡಿಕೊಂಡು ಬಿಟ್ಟ’ ಎಂದರು. ಕಾರಣ ಏನೂ ಇರಲಿಲ್ಲ. ಯಾಕೆ ಮಾಡಿಕೊಂಡ ಅಂತಾನೂ ಗೊತ್ತಿಲ್ಲ. ಬ್ರಾಂಡಿ ಬಾಟಲಿಯಲ್ಲಿ ಅರ್ಧ ಲೀಟರು ವಿಷ ಹಾಕಿಕೊಂಡು ಕುಡಿದಿದ್ದ. ಸಾಗರಕ್ಕೆ ಕರೆದುಕೊಂಡು ಹೋಗೋವಷ್ಟರಲ್ಲಿ ಹೋಗಿಬಿಟ್ಟ ಎಂದರು.
ಅದಕ್ಕೆ ಅವರು,
ಹೌದು ಮಾರಾಯಾ, ಮೊನ್ನೆ ೫ ನೇ ತಾರೀಖು ಹೀಗೆ ಮಾಡಿಕೊಂಡು ಬಿಟ್ಟ’ ಎಂದರು. ಕಾರಣ ಏನೂ ಇರಲಿಲ್ಲ. ಯಾಕೆ ಮಾಡಿಕೊಂಡ ಅಂತಾನೂ ಗೊತ್ತಿಲ್ಲ. ಬ್ರಾಂಡಿ ಬಾಟಲಿಯಲ್ಲಿ ಅರ್ಧ ಲೀಟರು ವಿಷ ಹಾಕಿಕೊಂಡು ಕುಡಿದಿದ್ದ. ಸಾಗರಕ್ಕೆ ಕರೆದುಕೊಂಡು ಹೋಗೋವಷ್ಟರಲ್ಲಿ ಹೋಗಿಬಿಟ್ಟ ಎಂದರು.
......
......
......
ಶೀರ್ಷಿಕೆ ಸೇರಿಸಿ |
Manju and Me |
ಮೊನ್ನೆ ನನಗೆ ಅವನು ಸಾಯುವ ಮುನ್ನ ಕರೆ ಮಾಡಿದ್ದಾಗ ಯಾವ ಒತ್ತಡದಲ್ಲಿದ್ದನೋ?
ನಾನು ಅವನು ಮಾಡಿದ್ದ ಕರೆಯನ್ನು ಸ್ವೀಕರಿಸದಿದ್ದದ್ದು ತಪ್ಪಾಯ್ತಾ? ಅಟ್ಲೀಸ್ಟ್ ಅವನಿಗೆ ಹೇಳಿದಂತೆ ನಾನು ಮರುದಿನವಾದರೂ ಕರೆ ಮಾಡಿದ್ದರೆ ಏನಾದರೂ ಹೇಳಿಕೊಳ್ಳುತಿದ್ನಾ..? ನನ್ನ ಮಾತುಗಳೇನಾದರೂ ಅವನು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯುತ್ತಿದ್ದವಾ?....
ಗೊತ್ತಿಲ್ಲ.
ಉಕ್ಕಡವನ್ನು ನೀರಿಗಿಳಿಸುವಾಗ, ಉಕ್ಕಡದಲ್ಲಿ, ಮನೆಯಲ್ಲಿ, ಅವರ ಮನೆಯ ಹೊರಗೆ, ನಾನು ಕ್ಲಿಕ್ಕಿಸಿದ ಫೋಟೋಗಳಲ್ಲಿ ಆದಷ್ಟು ಹೊತ್ತು ನೋಡಿದೆ. ತೀರಾ ಅಸಮಾಧಾನ ಕಾಡತೊಡಗಿತು. ಅಳು ತಡೆಯಲಾಗಲಿಲ್ಲ.
ಈಗ್ಗೆ ನಾಲ್ಕೈದು ವರ್ಷಗಳ ಹಿಂದೆ ಹೀಗೇ ಡಿಪ್ರೆಶನ್ಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಆತ್ಮೀಯ ಸ್ನೇಹಿತ ಪ್ರಶಾಂತನ ನೆನಪಾಗಿ ಯಾಕೋ ಅವನೀಗ ಇರಬೇಕಿತ್ತು ಎಂದು ಅನ್ನಿಸಲು ತೊಡಗಿತ್ತು. ಶಿವಮೊಗ್ಗದಲ್ಲಿದ್ದಾಗ ಅದೆಷ್ಟು ಹಚ್ಚಿಕೊಂಡಿದ್ವಿ ಇಬ್ಬರೂ... ಆತ ಬೆಂಗಳೂರು ಸೇರಿಕೊಂಡ ಮೇಲೆ ಇಬ್ಬರ ಜಗತ್ತೂ ದೂರವಾಗಿತ್ತು. ಆದರೆ ಆತ ಸಾಕಷ್ಟು ಒತ್ತಡದಲ್ಲಿದ್ದನೆಂದು ನನಗೆ ಗೊತ್ತಿತ್ತಾದರೂ ಮತ್ತೆ ಒಬ್ಬರೊಬ್ಬರು ಕುಳಿತು ಮಾತಾಡಿದ್ದೇ ಇಲ್ಲ. ಅವನೀಗ ಇದ್ದಿದ್ದರೆ ಹಾಗಾಗುತ್ತಿರಲಿಲ್ಲ. ತಿಂಗಳಲ್ಲಿ ಕೆಲ ಗಂಟೆಗಳಾದರೂ ನಾನು ಅವನೊಂದಿಗೆ ಕಳೆಯುತ್ತಿದ್ದೆ..... ಹೀಗೇ ನನ್ನಷ್ಟಕ್ಕೇ ನಾನು ಮಾತಾಡಿಕೊಂಡು ಹದಿನೈದು ದಿನವಾಗಿಲ್ಲ.
ಅದಕ್ಕೂ ಹಿಂದಿನ ವರ್ಷ ಅಗಲಿದ ನನ್ನೂರಿನ ಗೋಪಾಲಣ್ಣನ ಮುಖವನ್ನು ಈಗಲೂ ಶಿವಮೊಗ್ಗದ ರಸ್ತೆಗಳಲ್ಲಿ ಹುಡುಕುತ್ತಿರುತ್ತವೆ ನನ್ನ ಕಣ್ಣುಗಳು. ಯಾಕಂದರೆ ಅವರು ಊರಿಂದ ಬಂದಾಗೆಲ್ಲಾ ಶಿವಮೊಗ್ಗದ ಕರ್ನಟಕ ಸಂಘದ ಬಳಿ ಸಿಕ್ಕು ಇಬ್ಬರೂ ಟೀ ಕುಡಿಯುತ್ತಾ ಊರಿನ ಆಗುಹೋಗುಗಳ ಬಗ್ಗೆ ಶಿವಮೊಗ್ಗದ ನಮ್ಮ ’ಕ್ರಾಂತಿ’ಗಳ ಬಗ್ಗೆ ಹರಟುತ್ತಿದ್ದೆವು. ಇಬ್ಬರ ನಡುವೆ ಕ್ರಾಂತಿಗೀತೆಗಳ ವಿನಿಮಯವಾಗುತ್ತಿತ್ತು. ಊರಿಗೆ ಹೋದಾಗಲೂ ಅಷ್ಟೆ ನಾನು ಬಂದಿದ್ದು ತಿಳಿದೊಡನೆಯೇ ಗೋಪಾಲಣ್ಣ ಮನೆಗೆ ಹಾಜರ್....
ಮೊನ್ನೆ ಒಂದು ತಿಂಗಳ ಕಾಲ ಮನೆಯಲ್ಲಿದ್ದಾಗ ಗೋಪಾಲಣ್ಣ ಇದ್ದಿದ್ದರೆ ಅದೆಷ್ಟು ಸಲ ಬರುತ್ತಿದ್ದರೋ.....
...
Manju Rorrky |
ಪಟ್ಟಿಯಲ್ಲಿ ಈಗ ಮಂಜು ಸೇರಿದ್ದಾನೆ..... ’50 rupis karensi hako’ ಎಂದು ಆಗಾಗ ನನ್ನ ಮೊಬೈಲ್ಗೆ ಬರುತ್ತಿದ್ದ ಮೆಸೇಜು ಇನ್ನು ಬರುವುದಿಲ್ಲ ಎನ್ನುವುದನ್ನು ನೆನೆಸಿಕೊಂಡು ನೋವಾಗುತ್ತಿದೆ. ಪ್ರತಿ ಸಲ ಕರೆನ್ಸಿ ಹಾಕಿಸುವಾಗ ನನಗೆ ಅವರ ಮನೆಯಲ್ಲಿ ಸಿಗುವ ಪ್ರೀತಿ ಕಾಳಜಿಯನ್ನು ನೆನೆದು ಅದರ ಮುಂದೆ ಈ ಐವತ್ತು ರೂಪಾಯಿ ಯಾವ ದೊಡ್ಡದು ಎಂದುಕೊಳ್ಳುತ್ತಿದ್ದೆ.
.....